<p><strong>ಗೋಣಿಕೊಪ್ಪಲು:</strong> ಮಾನವ– ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಇಲ್ಲಿಗೆ ಸಮೀಪದ ತಿತಿಮತಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.</p>.<p>ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅರಣ್ಯಾಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ನಿತ್ಯ ಜನರು ವನ್ಯಜೀವಿಗಳ ದಾಳಿಯಿಂದ ಹೈರಣಾಗಿದ್ದಾರೆ. ಸಾಕುಪ್ರಾಣಿಗಳನ್ನು ನಿತ್ಯವೂ ಕಳೆದುಕೊಳ್ಳುತ್ತಿದ್ದಾರೆ. ಇವುಗಳನ್ನೆಲ್ಲ ತಡೆಗಟ್ಟಲು ಅರಣ್ಯ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಇಲ್ಲಿ ಅರಣ್ಯಾಧಿಕಾರಿಗಳು ಇಲ್ಲಿಗೆ ಬಂದು ಸಂಬಳ ತೆಗೆದುಕೊಂಡು ಹೋಗುವುದಕ್ಕಾಗಿ ಮಾತ್ರವೇ ಬಂದಿರುವುದಲ್ಲ. ಈ ಸಂಘರ್ಷ ತಪ್ಪಿಸಲು ನಿಮ್ಮ ಕಾಣಿಕೆ ಏನು ಎಂಬುದನ್ನು ಹೇಳಿ. ಎಷ್ಟು ಪ್ರಸ್ತಾವ ಕಳುಹಿಸಿದ್ದೀರಿ’ ಎಂದು ಪ್ರಶ್ನಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ವನ್ಯಜೀವಿ- ಮಾನವ ಸಂಘರ್ಷ ಹಿಂದೆಂದಿಗಿಂತಲೂ ಗಂಭೀರ ಸ್ಥಿತಿಯನ್ನು ತಲುಪಿದ್ದು, ರೈತರು ಅಳಿವು-ಉಳಿವಿನ ಹಂತವನ್ನು ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಂತರ, ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಮಾನವ– ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಇಲ್ಲಿಗೆ ಸಮೀಪದ ತಿತಿಮತಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.</p>.<p>ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅರಣ್ಯಾಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ನಿತ್ಯ ಜನರು ವನ್ಯಜೀವಿಗಳ ದಾಳಿಯಿಂದ ಹೈರಣಾಗಿದ್ದಾರೆ. ಸಾಕುಪ್ರಾಣಿಗಳನ್ನು ನಿತ್ಯವೂ ಕಳೆದುಕೊಳ್ಳುತ್ತಿದ್ದಾರೆ. ಇವುಗಳನ್ನೆಲ್ಲ ತಡೆಗಟ್ಟಲು ಅರಣ್ಯ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಇಲ್ಲಿ ಅರಣ್ಯಾಧಿಕಾರಿಗಳು ಇಲ್ಲಿಗೆ ಬಂದು ಸಂಬಳ ತೆಗೆದುಕೊಂಡು ಹೋಗುವುದಕ್ಕಾಗಿ ಮಾತ್ರವೇ ಬಂದಿರುವುದಲ್ಲ. ಈ ಸಂಘರ್ಷ ತಪ್ಪಿಸಲು ನಿಮ್ಮ ಕಾಣಿಕೆ ಏನು ಎಂಬುದನ್ನು ಹೇಳಿ. ಎಷ್ಟು ಪ್ರಸ್ತಾವ ಕಳುಹಿಸಿದ್ದೀರಿ’ ಎಂದು ಪ್ರಶ್ನಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ವನ್ಯಜೀವಿ- ಮಾನವ ಸಂಘರ್ಷ ಹಿಂದೆಂದಿಗಿಂತಲೂ ಗಂಭೀರ ಸ್ಥಿತಿಯನ್ನು ತಲುಪಿದ್ದು, ರೈತರು ಅಳಿವು-ಉಳಿವಿನ ಹಂತವನ್ನು ತಲುಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಂತರ, ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>