<p><strong>ಮಡಿಕೇರಿ: </strong>ಭತ್ತ ಖರೀದಿಯ ನೋಂದಣಿ ಪ್ರಕ್ರಿಯೆ ಶುರುವಾಗಿದ್ದು, ರೈತರು ಮತ್ತು ಗಿರಣಿ ಮಾಲೀಕರು ಆಯಾ ವ್ಯಾಪ್ತಿಯ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕೋರಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಭತ್ತ ಖರೀದಿಗೆ ಸಾಕಷ್ಟು ಬೇಡಿಕೆಯಿದೆ. ಈ ಬಗ್ಗೆ ರೈತರು ಮತ್ತು ಅಕ್ಕಿ ಗಿರಣಿ ಮಾಲೀಕರು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕೋರಿದರು.</p>.<p>ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರ ಎಪಿಎಂಸಿಗಳಲ್ಲಿರೈತರು ಮತ್ತು ಗಿರಣಿ ಮಾಲೀಕರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದರು.</p>.<p>ಆಹಾರ ಇಲಾಖೆ ಉಪ ನಿರ್ದೇಶಕ ಎಸ್. ಸದಾಶಿವಯ್ಯ ಮಾತನಾಡಿ, ಜಿಲ್ಲೆಯಲ್ಲಿ 33 ಅಕ್ಕಿ ಗಿರಣಿಗಳಿದ್ದು, ಈವರೆಗೆ ಇಬ್ಬರು ಗಿರಣಿ ಮಾಲೀಕರು ಮಾತ್ರ ಹೆಸರು ನೋಂದಾಯಿಸಿದ್ದಾರೆ. 11 ಮಂದಿ ರೈತರು ಮಾತ್ರ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಕನಿಷ್ಠ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 1750, ನಿಗದಿ ಪಡಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಅಕ್ಕಿ ಗಿರಣಿ ಮಾಲೀಕರು ಒಂದು ಕ್ವಿಂಟಲ್ ಭತ್ತಕ್ಕೆ 67 ಕೆ.ಜಿ. ಅಕ್ಕಿ ನೀಡಬೇಕಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಭತ್ತ ಖರೀದಿಯ ನೋಂದಣಿ ಪ್ರಕ್ರಿಯೆ ಶುರುವಾಗಿದ್ದು, ರೈತರು ಮತ್ತು ಗಿರಣಿ ಮಾಲೀಕರು ಆಯಾ ವ್ಯಾಪ್ತಿಯ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕೋರಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಭತ್ತ ಖರೀದಿಗೆ ಸಾಕಷ್ಟು ಬೇಡಿಕೆಯಿದೆ. ಈ ಬಗ್ಗೆ ರೈತರು ಮತ್ತು ಅಕ್ಕಿ ಗಿರಣಿ ಮಾಲೀಕರು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕೋರಿದರು.</p>.<p>ಮಡಿಕೇರಿ, ಗೋಣಿಕೊಪ್ಪಲು, ಕುಶಾಲನಗರ ಎಪಿಎಂಸಿಗಳಲ್ಲಿರೈತರು ಮತ್ತು ಗಿರಣಿ ಮಾಲೀಕರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದರು.</p>.<p>ಆಹಾರ ಇಲಾಖೆ ಉಪ ನಿರ್ದೇಶಕ ಎಸ್. ಸದಾಶಿವಯ್ಯ ಮಾತನಾಡಿ, ಜಿಲ್ಲೆಯಲ್ಲಿ 33 ಅಕ್ಕಿ ಗಿರಣಿಗಳಿದ್ದು, ಈವರೆಗೆ ಇಬ್ಬರು ಗಿರಣಿ ಮಾಲೀಕರು ಮಾತ್ರ ಹೆಸರು ನೋಂದಾಯಿಸಿದ್ದಾರೆ. 11 ಮಂದಿ ರೈತರು ಮಾತ್ರ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಕನಿಷ್ಠ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹ 1750, ನಿಗದಿ ಪಡಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಅಕ್ಕಿ ಗಿರಣಿ ಮಾಲೀಕರು ಒಂದು ಕ್ವಿಂಟಲ್ ಭತ್ತಕ್ಕೆ 67 ಕೆ.ಜಿ. ಅಕ್ಕಿ ನೀಡಬೇಕಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>