ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಂತ ನವಿಲು ಮಾರಾಟ ಯತ್ನ; ಇಬ್ಬರ ಬಂಧನ

Last Updated 24 ಸೆಪ್ಟೆಂಬರ್ 2022, 5:44 IST
ಅಕ್ಷರ ಗಾತ್ರ

ಮಡಿಕೇರಿ: ಜೀವಂತ ನವಿಲನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸರು ನವಿಲನ್ನು ವಶಕ್ಕೆ ಪಡೆದಿದ್ದಾರೆ.

ಜೆ.ಎಂ.ಕಾರ್ತಿಕ್ ಹಾಗೂ ಎಸ್.ಎಚ್.ಹರೀಶ್ ಬಂಧಿತರು. ಇವರು ಮಡಿಕೇರಿ– ಸುಂಟಿಕೊಪ್ಪ ರಸ್ತೆಯಲ್ಲಿ ಮೀಸಲು ಅರಣ್ಯಕ್ಕೆ ಹೋಗುವ ಮುಖ್ಯರಸ್ತೆ ಬದಿಯಲ್ಲಿ ನವಿಲನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಐಡಿ ಪೊಲೀಸ್ ಅರಣ್ಯ ಘಟಕದ ಎಸ್‌.ಪಿ ಕೆ.ಬಿ.ವಿಶ್ವನಾಥ್, ಸಬ್‌ಇನ್‌ಸ್ಪೆಕ್ಟರ್ ಸವಿ, ಹೆಡ್‌ಕಾನ್‌ಸ್ಟೆಬಲ್‌ಗಳಾದ ಶೇಖರ್,ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ್, ಕಾನ್‌ಸ್ಟೆಬಲ್‌ಗಳಾದ ಸ್ವಾಮಿ ಹಾಗೂ ಮಂಜುನಾಥ್ ಕಾರ್ಯಾಚರಣೆ ತಂಡದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT