<p><strong>ನಾಪೋಕ್ಲು</strong>: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳು ನಿರಂತರವಾಗಿ ಬಾಳೆ, ಕಾಫಿ, ತೆಂಗು, ಅಡಿಕೆ ಬೆಳೆಗಳನ್ನು ನಾಶಗೊಳಿಸುತ್ತಿದ್ದು, ಕಾಡಾನೆಗಳನ್ನು ಇಲ್ಲಿಂದ ಸ್ಥಳಾಂತರಿಸುವ ಮೂಲಕ ರೈತರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಕಾಡಾನೆಗಳು ಗುರುವಾರ ರಾತ್ರಿ ಚೋಕಿರ ಉತ್ತಪ್ಪ, ಗಣಪತಿ, ಚಂಗಪ್ಪ, ತೋಲಂಡ ಅಯ್ಯಪ್ಪ, ಎಡಿಕೇರಿ ಗಣಪತಿ ಅವರ ತೋಟಕ್ಕೆ ದಾಳಿ ಮಾಡಿ ನಾಶಗೊಳಿಸಿವೆ. ಸ್ಥಳಕ್ಕೆ ಅರಣ್ಯ ರಕ್ಷಕರಾದ ಕಾಳೇಗೌಡ ಮತ್ತು ಸಿಬ್ಬಂದಿ ಆಗಮಿಸಿ ಪರಿಹಾರದ ಭರವಸೆ ನೀಡಿದ್ದಾರೆ.</p>.<p class="Briefhead"><strong>ಕಾಡಾನೆ ಹಾವಳಿ ತಡೆಗೆ ಒತ್ತಾಯ<br />ಸುಂಟಿಕೊಪ್ಪ</strong>: ರಾತ್ರಿ ವೇಳೆ ಒಂಟಿ ಸಲಗ ತೋಟಕ್ಕೆ ಲಗ್ಗೆಯಿಟ್ಟು ಬಾಳೆ ಗಿಡ, ತೆಂಗಿನ ಸಸಿ, ಮರಗೆಣಸನ್ನು ತಿಂದು ನಾಶಪಡಿಸಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಐಗೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಗುರುವಾರ ರಾತ್ರಿ ಕಾಡಾನೆಯೊಂದು ಗ್ರಾಮದ ಪಿ.ಕೆ.ಸೋಮಯ್ಯ, ಎಂ.ಸಿ.ಸಂಜಯ್, ಅಪ್ಪಣಿ, ಹರಪಳ್ಳಿತೋಟ, ಜಿ.ಕೆ.ಬಾಲಕೃಷ್ಣ ಅವರ ಜಮೀನಿಗೆ ನುಗ್ಗಿ ಬಾಳೆ ಗಿಡ, ತೆಂಗಿನ ಸಸಿ, ಮರಗೆಣಸನ್ನು ಬೇಕಾಬಿಟ್ಟಿ ತಿಂದು, ಕಾಫಿ ಗಿಡಗಳನ್ನು ಕಿತ್ತು ನಾಶಪಡಿಸಿದೆ. </p>.<p>‘ಐಗೂರು ಯಡವಾರೆ, ಕಾಜೂರು, ಯಡವನಾಡು ವಲಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಹಿಂಡು ಹಿಂಡಾಗಿ ಲಗ್ಗೆಯಿಡುತ್ತಿವೆ. ಅರಣ್ಯ ಇಲಾಖೆಯವರು ಆನೆಯನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು</strong>: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳು ನಿರಂತರವಾಗಿ ಬಾಳೆ, ಕಾಫಿ, ತೆಂಗು, ಅಡಿಕೆ ಬೆಳೆಗಳನ್ನು ನಾಶಗೊಳಿಸುತ್ತಿದ್ದು, ಕಾಡಾನೆಗಳನ್ನು ಇಲ್ಲಿಂದ ಸ್ಥಳಾಂತರಿಸುವ ಮೂಲಕ ರೈತರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<p>ಕಾಡಾನೆಗಳು ಗುರುವಾರ ರಾತ್ರಿ ಚೋಕಿರ ಉತ್ತಪ್ಪ, ಗಣಪತಿ, ಚಂಗಪ್ಪ, ತೋಲಂಡ ಅಯ್ಯಪ್ಪ, ಎಡಿಕೇರಿ ಗಣಪತಿ ಅವರ ತೋಟಕ್ಕೆ ದಾಳಿ ಮಾಡಿ ನಾಶಗೊಳಿಸಿವೆ. ಸ್ಥಳಕ್ಕೆ ಅರಣ್ಯ ರಕ್ಷಕರಾದ ಕಾಳೇಗೌಡ ಮತ್ತು ಸಿಬ್ಬಂದಿ ಆಗಮಿಸಿ ಪರಿಹಾರದ ಭರವಸೆ ನೀಡಿದ್ದಾರೆ.</p>.<p class="Briefhead"><strong>ಕಾಡಾನೆ ಹಾವಳಿ ತಡೆಗೆ ಒತ್ತಾಯ<br />ಸುಂಟಿಕೊಪ್ಪ</strong>: ರಾತ್ರಿ ವೇಳೆ ಒಂಟಿ ಸಲಗ ತೋಟಕ್ಕೆ ಲಗ್ಗೆಯಿಟ್ಟು ಬಾಳೆ ಗಿಡ, ತೆಂಗಿನ ಸಸಿ, ಮರಗೆಣಸನ್ನು ತಿಂದು ನಾಶಪಡಿಸಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಐಗೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಗುರುವಾರ ರಾತ್ರಿ ಕಾಡಾನೆಯೊಂದು ಗ್ರಾಮದ ಪಿ.ಕೆ.ಸೋಮಯ್ಯ, ಎಂ.ಸಿ.ಸಂಜಯ್, ಅಪ್ಪಣಿ, ಹರಪಳ್ಳಿತೋಟ, ಜಿ.ಕೆ.ಬಾಲಕೃಷ್ಣ ಅವರ ಜಮೀನಿಗೆ ನುಗ್ಗಿ ಬಾಳೆ ಗಿಡ, ತೆಂಗಿನ ಸಸಿ, ಮರಗೆಣಸನ್ನು ಬೇಕಾಬಿಟ್ಟಿ ತಿಂದು, ಕಾಫಿ ಗಿಡಗಳನ್ನು ಕಿತ್ತು ನಾಶಪಡಿಸಿದೆ. </p>.<p>‘ಐಗೂರು ಯಡವಾರೆ, ಕಾಜೂರು, ಯಡವನಾಡು ವಲಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆ ಹಿಂಡು ಹಿಂಡಾಗಿ ಲಗ್ಗೆಯಿಡುತ್ತಿವೆ. ಅರಣ್ಯ ಇಲಾಖೆಯವರು ಆನೆಯನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>