ಕಾಡಾನೆಗಳು ಕೂತಿ, ನಗರಳ್ಳಿ ಭಾಗದಲ್ಲಿ ಸಂಚರಿಸುತ್ತಿದ್ದು, ಜನರು ಹಗಲಿನ ವೇಳೆಯಲ್ಲಿಯೇ ಸಂಚರಿಸಲು ಭಯಪಡುವಂತಾಗಿದೆ. ಅಲ್ಲದೆ, ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸುತ್ತಮುತ್ತಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.