<p><strong>ಸುಂಟಿಕೊಪ್ಪ:</strong> ಸಮೀಪದ ಏಳನೇ ಹೊಸಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ಮತ್ತೆ ಶುಕ್ರವಾರವೂ ಕಾಡಾನೆಗಳು ಪಥ ಸಂಚಲನ ಮುಂದುವರೆಸಿದವು.</p>.<p>ಸಮೀಪದ ಅಂದಗೋವೆ ಪೈಸಾರಿ ರಸ್ತೆಯಲ್ಲಿ ಯಾವುದೇ ಭಯವಿಲ್ಲದೇ ಮಧ್ಯೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡ ರಸ್ತೆ ಬದಿಯಲ್ಲಿದ್ದ ಜನ ಭಯಭೀತರಾಗಿ ಮನೆಯತ್ತ ಓಡಿದರು.</p>.<p>ಇದೇ ವೇಳೆ ಕಾಡಾನೆ ಘೀಳಿಡುತ್ತಾ ರಾಷ್ಟ್ರೀಯ ಹೆದ್ದಾರಿಯತ್ತ ಬಂದು ಮೆಟ್ನಳ್ಳ ಮಾರ್ಗವಾಗಿ ಆನೆಕಾಡು ಅರಣ್ಯದೊಳಗೆ ನುಗ್ಗಿ ಕಣ್ಮರೆಗೊಂಡಿತು.</p>.<p>ಅದೇ ರೀತಿ ತೊಂಡೂರು ಗ್ರಾಮದ ಮನೆ ಮುಂಭಾಗದಲ್ಲಿಯೇ ಕಾಡಾನೆ ಆರಾಮವಾಗಿ ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು.</p>.<p> ಈ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಆಗಾಗ್ಗೆ ಜನಸಾಮಾನ್ಯರ ಮತ್ತು ಮನೆಗಳ ಅಕ್ಕಪಕ್ಕದಲ್ಲಿ ಸಂಚರಿಸುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕಾಲ ಕಳೆಯುವಂತಾಗಿದೆ. ಯಾವ ಸಮಯದಲ್ಲಿ ತಿರುಗಿ ಬೀಳುತ್ತವೆಯೋ ಎಂಬ ಭೀತಿಯಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು ಓಡಾಡುವಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಪಾಯ ಎದುರಾಗುವ ಮುನ್ನ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಸಮೀಪದ ಏಳನೇ ಹೊಸಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ ಮತ್ತೆ ಶುಕ್ರವಾರವೂ ಕಾಡಾನೆಗಳು ಪಥ ಸಂಚಲನ ಮುಂದುವರೆಸಿದವು.</p>.<p>ಸಮೀಪದ ಅಂದಗೋವೆ ಪೈಸಾರಿ ರಸ್ತೆಯಲ್ಲಿ ಯಾವುದೇ ಭಯವಿಲ್ಲದೇ ಮಧ್ಯೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡ ರಸ್ತೆ ಬದಿಯಲ್ಲಿದ್ದ ಜನ ಭಯಭೀತರಾಗಿ ಮನೆಯತ್ತ ಓಡಿದರು.</p>.<p>ಇದೇ ವೇಳೆ ಕಾಡಾನೆ ಘೀಳಿಡುತ್ತಾ ರಾಷ್ಟ್ರೀಯ ಹೆದ್ದಾರಿಯತ್ತ ಬಂದು ಮೆಟ್ನಳ್ಳ ಮಾರ್ಗವಾಗಿ ಆನೆಕಾಡು ಅರಣ್ಯದೊಳಗೆ ನುಗ್ಗಿ ಕಣ್ಮರೆಗೊಂಡಿತು.</p>.<p>ಅದೇ ರೀತಿ ತೊಂಡೂರು ಗ್ರಾಮದ ಮನೆ ಮುಂಭಾಗದಲ್ಲಿಯೇ ಕಾಡಾನೆ ಆರಾಮವಾಗಿ ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು.</p>.<p> ಈ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಆಗಾಗ್ಗೆ ಜನಸಾಮಾನ್ಯರ ಮತ್ತು ಮನೆಗಳ ಅಕ್ಕಪಕ್ಕದಲ್ಲಿ ಸಂಚರಿಸುತ್ತಿರುವುದರಿಂದ ಭಯದ ವಾತಾವರಣದಲ್ಲಿ ಕಾಲ ಕಳೆಯುವಂತಾಗಿದೆ. ಯಾವ ಸಮಯದಲ್ಲಿ ತಿರುಗಿ ಬೀಳುತ್ತವೆಯೋ ಎಂಬ ಭೀತಿಯಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು ಓಡಾಡುವಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಪಾಯ ಎದುರಾಗುವ ಮುನ್ನ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>