<p><strong>ಮಡಿಕೇರಿ:</strong> ಇಲ್ಲಿನ ಐತಿಹಾಸಿಕ ಓಂಕಾರೇಶ್ವರ ದೇವಾಲಯವನ್ನು ಅಭಿವೃದ್ಧಿಪಡಿಸುವ ಕನಸುಗಳನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಅಧ್ಯಕ್ಷರು ಇಲ್ಲಿನ ಪತ್ರಿಕಾಭವನದಲ್ಲಿ ಬಿಚ್ಚಿಟ್ಟಿರು.</p>.<p>‘₹ 5 ಕೋಟಿ ಮೊತ್ತದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಚಿಂತಿಸಲಾಗಿದೆ’ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಿ.ರಾಜೇಂದ್ರ ತಿಳಿಸಿದರು.</p>.<p>‘ಆಂಜನೇಯ ದೇವಾಲಯದ ಈಶಾನ್ಯ ದಿಕ್ಕಿನಲ್ಲಿ ನವಗ್ರಹ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದ್ದು, ಈ ಕೆಲಸಕ್ಕೆ ಸಾರ್ವಜನಿಕರ ಸಹಕಾರದೊಂದಿಗೆ ಅತಿ ಶೀಘ್ರದಲ್ಲಿ ವ್ಯವಸ್ಥಾಪನಾ ಸಮಿತಿಯು ಸದ್ಯದಲ್ಲೇ ಕಾರ್ಯೊನ್ಮುಖವಾಗಲಿದೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಉಳಿದಂತೆ, ಓಂಕಾರೇಶ್ವರ ದೇವಾಲಯ ಹಾಗೂ ಆಂಜನೇಯ ದೇವಾಲಯದ ಮುಖ್ಯ ಪ್ರವೇಶ ದ್ವಾರ, ಪ್ರಾರ್ಥನಾ ಕೇಂದ್ರ, ನವಗ್ರಹ ವೃಕ್ಷೋದ್ಯಾನ, ಕೆರೆ ಅಂಗಳದ ಜೀರ್ಣೋದ್ಧಾರ ಕಾರ್ಯಗಳನ್ನು ಸಹ ನಡೆಸಬೇಕಿದೆ ಎಂದರು.</p>.<p>ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯಕ್ಕೆ ಹೊಂದಿಕೊಂಡಿರುವ ಪ್ರವೇಶದ್ವಾರದ ಕಮಾನಿನಲ್ಲಿ ಎಡಬದಿಗೆ ಶಿವಲಿಂಗ ಹಾಗೂ ನಂದಿಯ ಮೂರ್ತಿ ಮಧ್ಯ ಭಾಗದಲ್ಲಿ ಪಟ್ಟಾಭಿರಾಮ– ಲಕ್ಷ್ಮಣ, ಸೀತೆಯ ವಿಗ್ರಹ ಇರಲಿದೆ. ಬಲಭಾಗದಲ್ಲಿ ಕೈಮುಗಿದು ಕುಳಿತಿರುವ ಭಂಗಿಯಲ್ಲಿರುವ ಆಂಜನೇಯಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಹ ಚಿಂತಿಸಲಾಗಿದೆ ಎಂದರು.</p>.<p>ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತೃದಲ್ಲಿ ನವನೀತ ಪ್ರಿಯ ಜ್ಯೋತಿಷರ ಮಾರ್ಗದರ್ಶನದಲ್ಲಿ ಹಾಗೂ ವಾಸ್ತುತಜ್ಞ ರಮೇಶ್ ಕಾರಂತ್ ಅವರಿಂದ ದೇಗುಲದ ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಇಟ್ಟಾಗ ಈ ಸಲಹೆಗಳು ವ್ಯಕ್ತವಾದವು ಎಂದು ಹೇಳಿದರು.</p>.<p>ಹುಂಡಿಗೆ ಹಣ ಹಾಕಿದರೆ ಸರ್ಕಾರಕ್ಕೆ ಹೋಗುತ್ತದೆ ಎಂಬ ತಪ್ಪು ನಂಬಿಕೆ ಇದೆ. ಇದು ಸರಿಯಲ್ಲ. ಹುಂಡಿಗೆ ಹಣ ಹಾಕಿದರೆ ಅದು ಸಂಪೂರ್ಣ ದೇಗುಲದ ಅಭಿವೃದ್ಧಿಗೆ ಬಳಕೆಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಮಾತನಾಡಿ, ‘ಪಾರದರ್ಶಕತೆ ಇರಲಿ ಎಂಬ ಕಾರಣಕ್ಕೆ ಹೊಸದಾಗಿ ನೇಮಕವಾದ ವ್ಯವಸ್ಥಾಪನಾ ಮಂಡಳಿಯು ದೇಗುಲದಲ್ಲಿರುವ ಪರಿಕರಗಳ ಮೌಲ್ಯಮಾಪನ ಮಾಡಲು ನಿರ್ಧರಿಸಿತು’ ಎಂದರು.</p>.<p>ಸಮಿತಿ ಸದಸ್ಯ ನಿರಂಜನ್ ಮಾತನಾಡಿ, ‘ದೇಗುಲಕ್ಕೆ ದಾನ ನೀಡಿರುವ ಹಲವು ಆಸ್ತಿಗಳನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲು ಕಾನೂನು ಹೋರಾಟ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<p>ಸಮಿತಿ ಸದಸ್ಯೆ ಮೀನಾಕ್ಷಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿನ ಐತಿಹಾಸಿಕ ಓಂಕಾರೇಶ್ವರ ದೇವಾಲಯವನ್ನು ಅಭಿವೃದ್ಧಿಪಡಿಸುವ ಕನಸುಗಳನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಅಧ್ಯಕ್ಷರು ಇಲ್ಲಿನ ಪತ್ರಿಕಾಭವನದಲ್ಲಿ ಬಿಚ್ಚಿಟ್ಟಿರು.</p>.<p>‘₹ 5 ಕೋಟಿ ಮೊತ್ತದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಚಿಂತಿಸಲಾಗಿದೆ’ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಿ.ರಾಜೇಂದ್ರ ತಿಳಿಸಿದರು.</p>.<p>‘ಆಂಜನೇಯ ದೇವಾಲಯದ ಈಶಾನ್ಯ ದಿಕ್ಕಿನಲ್ಲಿ ನವಗ್ರಹ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದ್ದು, ಈ ಕೆಲಸಕ್ಕೆ ಸಾರ್ವಜನಿಕರ ಸಹಕಾರದೊಂದಿಗೆ ಅತಿ ಶೀಘ್ರದಲ್ಲಿ ವ್ಯವಸ್ಥಾಪನಾ ಸಮಿತಿಯು ಸದ್ಯದಲ್ಲೇ ಕಾರ್ಯೊನ್ಮುಖವಾಗಲಿದೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಉಳಿದಂತೆ, ಓಂಕಾರೇಶ್ವರ ದೇವಾಲಯ ಹಾಗೂ ಆಂಜನೇಯ ದೇವಾಲಯದ ಮುಖ್ಯ ಪ್ರವೇಶ ದ್ವಾರ, ಪ್ರಾರ್ಥನಾ ಕೇಂದ್ರ, ನವಗ್ರಹ ವೃಕ್ಷೋದ್ಯಾನ, ಕೆರೆ ಅಂಗಳದ ಜೀರ್ಣೋದ್ಧಾರ ಕಾರ್ಯಗಳನ್ನು ಸಹ ನಡೆಸಬೇಕಿದೆ ಎಂದರು.</p>.<p>ಓಂಕಾರೇಶ್ವರ ಹಾಗೂ ಆಂಜನೇಯ ದೇವಾಲಯಕ್ಕೆ ಹೊಂದಿಕೊಂಡಿರುವ ಪ್ರವೇಶದ್ವಾರದ ಕಮಾನಿನಲ್ಲಿ ಎಡಬದಿಗೆ ಶಿವಲಿಂಗ ಹಾಗೂ ನಂದಿಯ ಮೂರ್ತಿ ಮಧ್ಯ ಭಾಗದಲ್ಲಿ ಪಟ್ಟಾಭಿರಾಮ– ಲಕ್ಷ್ಮಣ, ಸೀತೆಯ ವಿಗ್ರಹ ಇರಲಿದೆ. ಬಲಭಾಗದಲ್ಲಿ ಕೈಮುಗಿದು ಕುಳಿತಿರುವ ಭಂಗಿಯಲ್ಲಿರುವ ಆಂಜನೇಯಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸಹ ಚಿಂತಿಸಲಾಗಿದೆ ಎಂದರು.</p>.<p>ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತೃದಲ್ಲಿ ನವನೀತ ಪ್ರಿಯ ಜ್ಯೋತಿಷರ ಮಾರ್ಗದರ್ಶನದಲ್ಲಿ ಹಾಗೂ ವಾಸ್ತುತಜ್ಞ ರಮೇಶ್ ಕಾರಂತ್ ಅವರಿಂದ ದೇಗುಲದ ಅಭಿವೃದ್ಧಿ ವಿಚಾರವಾಗಿ ಪ್ರಶ್ನೆ ಇಟ್ಟಾಗ ಈ ಸಲಹೆಗಳು ವ್ಯಕ್ತವಾದವು ಎಂದು ಹೇಳಿದರು.</p>.<p>ಹುಂಡಿಗೆ ಹಣ ಹಾಕಿದರೆ ಸರ್ಕಾರಕ್ಕೆ ಹೋಗುತ್ತದೆ ಎಂಬ ತಪ್ಪು ನಂಬಿಕೆ ಇದೆ. ಇದು ಸರಿಯಲ್ಲ. ಹುಂಡಿಗೆ ಹಣ ಹಾಕಿದರೆ ಅದು ಸಂಪೂರ್ಣ ದೇಗುಲದ ಅಭಿವೃದ್ಧಿಗೆ ಬಳಕೆಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಮಾತನಾಡಿ, ‘ಪಾರದರ್ಶಕತೆ ಇರಲಿ ಎಂಬ ಕಾರಣಕ್ಕೆ ಹೊಸದಾಗಿ ನೇಮಕವಾದ ವ್ಯವಸ್ಥಾಪನಾ ಮಂಡಳಿಯು ದೇಗುಲದಲ್ಲಿರುವ ಪರಿಕರಗಳ ಮೌಲ್ಯಮಾಪನ ಮಾಡಲು ನಿರ್ಧರಿಸಿತು’ ಎಂದರು.</p>.<p>ಸಮಿತಿ ಸದಸ್ಯ ನಿರಂಜನ್ ಮಾತನಾಡಿ, ‘ದೇಗುಲಕ್ಕೆ ದಾನ ನೀಡಿರುವ ಹಲವು ಆಸ್ತಿಗಳನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲು ಕಾನೂನು ಹೋರಾಟ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<p>ಸಮಿತಿ ಸದಸ್ಯೆ ಮೀನಾಕ್ಷಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>