‘ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಬೇಕೆಂಬ ಸೂಚನೆಯಿದ್ದರೂ ಪಾಲನೆ ಆಗುತ್ತಿಲ್ಲ. ಜತೆಗೆ, ಅದೆಷ್ಟೋ ಪ್ರಾಣಿ, ಪಕ್ಷಿಗಳ ಪ್ರಾಣಕ್ಕೂ ಕುತ್ತು ತರುತ್ತಿದೆ. ಅರಣ್ಯ ಇಲಾಖೆ, ಮೀಸಲು ಅರಣ್ಯದಲ್ಲಿ ಪ್ಲಾಸ್ಟಿಕ್ ವಸ್ತುಗಳ ನಿಷೇಧಕ್ಕೆ ಹಲವು ಯೋಜನೆ ರೂಪಿಸಿದೆ. ಮೀಸಲು ಅರಣ್ಯದ ಒಳಗೆ ಹಲವೆಡೆ ಸೂಚನಾ ಫಲಕ ಅಳವಡಿಸಲಾಗಿದೆ. ಆದರೂ, ಪ್ರಯೋಜನಕ್ಕೆ ಬರುತ್ತಿಲ್ಲ’ ಎಂದು ಪ್ರಾಣಿಪ್ರಿಯ ಕರುಣ ಕಾಳಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.