ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸರು ವ್ಯಾಪಕ ಕ್ರಮ ಕೈಗೊಂಡಿದ್ದರು. ಮಡಿಕೇರಿಯಲ್ಲಿ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿತ್ತು. ನಗರದ ಪೇಟೆ ಶ್ರೀರಾಮಮಂದಿರ, ಚೌಕಿ ಹಾಗೂ ಜನರಲ್ ತಿಮ್ಮಯ್ಯ ವೃತ್ತ ಹಾಗೂ ಮಹದೇವಪೇಟೆಯಲ್ಲಿ ಹೆಚ್ಚಿನ ಪೊಲೀಸರು ಕಂಡುಬಂದರು. ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ.