<p><strong>ನಾಪೋಕ್ಲು:</strong> ಬಿರುಸಿನ ಮಳೆಯಲ್ಲಿ ಭಕ್ತರ ಉದ್ಘೋಷಗಳ ನಡುವೆ ತ್ರಿವೇಣಿ ಸಂಗಮದಲ್ಲಿ ಉತ್ಸವ ಮಂಟಪವನ್ನು ತೇಲಿ ಬಿಡುವ ಮೂಲಕ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ಸಾಂಪ್ರದಾಯಿಕ ಆಚರಣೆಗೆ ಗುರುವಾರ ತೆರೆ ಎಳೆಯಲಾಯಿತು. ನೂರಾರು ಭಕ್ತರು ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವಕ್ಕೆ ಸಾಕ್ಷಿಯಾದರು.</p>.<p>ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕರ್ಕಾಟಕ ಮಾಸ, ಆಷಾಢ ಕೃಷ್ಣಪಕ್ಷದ ಅಮಾವಾಸ್ಯೆಯಂದು ಗುರುವಾರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ಜರುಗಿತು. ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಮೂರು ಬಾರಿ ಪ್ರದಕ್ಷಿಣೆ ಮಾಡಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ’ ಎಂದರು.</p>.<p>ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಅರ್ಚಕವೃಂದ ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲಿಂಕಾನ ಉತ್ಸವಕ್ಕೆ ಚಾಲನೆ ನೀಡಿದರು.</p>.<p>ಅರ್ಚಕರಾದ ಹರೀಶ್ ಭಟ್ ಮತ್ತು ರವಿ ಭಟ್ ನೇತೃತ್ವದಲ್ಲಿ ಉತ್ಸವ ನಡೆಯಿತು. ಆಡಳಿತಾಧಿಕಾರಿ ಚಂದ್ರಶೇಖರ್, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್, ಭಾಗಮಂಡಲ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ, ಭಾಗಮಂಡಲ ಠಾಣೆಯ ಪಿಎಸ್ಐ ಶೋಭಾ ಲಮಾಣಿ, ಆಡಳಿತಾಧಿಕಾರಿ ಚಂದ್ರಶೇಖರ್, ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ, ಭಗಂಡೇಶ್ವರ ದೇವಾಲಯದ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.</p>.<h2>ಏನಿದು ಪೊಲಿಂಕಾನ? </h2>.<p>ಪ್ರಚಲಿತದಲ್ಲಿರುವ ಕಥೆಯೊಂದರ ಪ್ರಕಾರ ಮಹಿಳೆಯೊಬ್ಬರಿಗೆ ಚೊಚ್ಚಲ ಹೆರಿಗೆಗೆಂದು ತವರಿಗೆ ಹೋಗಬೇಕಾಗಿ ಬಂದ ಸಂದರ್ಭ ಕಾವೇರಿ ನದಿಯಲ್ಲಿ ಪ್ರವಾಹವಿದ್ದು ಜಲಾವೃತ ನದಿಗೆ ಬಾಗಿನ ಹರಕೆ ಸಲ್ಲಿಸುತ್ತಾಳೆ. ಬಳಿಕ ಪ್ರವಾಹ ಇಳಿಮುಖಗೊಂಡಿದ್ದು ಆಕೆ ತವರಿಗೆ ತೆರಳುವಂತಾಯಿತು.ಈ ಹಿನ್ನೆಲೆಯಲ್ಲಿ ಪ್ರತಿವರ್ಷ ನದಿಗೆ ಬಾಗಿನ ಅರ್ಪಿಸುವ ಸಂಪ್ರದಾಯ ನಡೆಸಲಾಗುತ್ತಿದೆ. </p><p>ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ವಾಡಿಕೆ. ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಿಶೇಷವಾಗಿ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ಬಿರುಸಿನ ಮಳೆಯಲ್ಲಿ ಭಕ್ತರ ಉದ್ಘೋಷಗಳ ನಡುವೆ ತ್ರಿವೇಣಿ ಸಂಗಮದಲ್ಲಿ ಉತ್ಸವ ಮಂಟಪವನ್ನು ತೇಲಿ ಬಿಡುವ ಮೂಲಕ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ಸಾಂಪ್ರದಾಯಿಕ ಆಚರಣೆಗೆ ಗುರುವಾರ ತೆರೆ ಎಳೆಯಲಾಯಿತು. ನೂರಾರು ಭಕ್ತರು ಭಾಗಮಂಡಲದಲ್ಲಿ ನಡೆದ ಪೊಲಿಂಕಾನ ಉತ್ಸವಕ್ಕೆ ಸಾಕ್ಷಿಯಾದರು.</p>.<p>ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಕರ್ಕಾಟಕ ಮಾಸ, ಆಷಾಢ ಕೃಷ್ಣಪಕ್ಷದ ಅಮಾವಾಸ್ಯೆಯಂದು ಗುರುವಾರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ಜರುಗಿತು. ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಮೂರು ಬಾರಿ ಪ್ರದಕ್ಷಿಣೆ ಮಾಡಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ’ ಎಂದರು.</p>.<p>ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಅರ್ಚಕವೃಂದ ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲಿಂಕಾನ ಉತ್ಸವಕ್ಕೆ ಚಾಲನೆ ನೀಡಿದರು.</p>.<p>ಅರ್ಚಕರಾದ ಹರೀಶ್ ಭಟ್ ಮತ್ತು ರವಿ ಭಟ್ ನೇತೃತ್ವದಲ್ಲಿ ಉತ್ಸವ ನಡೆಯಿತು. ಆಡಳಿತಾಧಿಕಾರಿ ಚಂದ್ರಶೇಖರ್, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್, ಭಾಗಮಂಡಲ ಗೌಡ ಸಮಾಜದ ಅಧ್ಯಕ್ಷ ಕುದುಪಜೆ ಪಳಂಗಪ್ಪ, ಭಾಗಮಂಡಲ ಠಾಣೆಯ ಪಿಎಸ್ಐ ಶೋಭಾ ಲಮಾಣಿ, ಆಡಳಿತಾಧಿಕಾರಿ ಚಂದ್ರಶೇಖರ್, ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ, ಭಗಂಡೇಶ್ವರ ದೇವಾಲಯದ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.</p>.<h2>ಏನಿದು ಪೊಲಿಂಕಾನ? </h2>.<p>ಪ್ರಚಲಿತದಲ್ಲಿರುವ ಕಥೆಯೊಂದರ ಪ್ರಕಾರ ಮಹಿಳೆಯೊಬ್ಬರಿಗೆ ಚೊಚ್ಚಲ ಹೆರಿಗೆಗೆಂದು ತವರಿಗೆ ಹೋಗಬೇಕಾಗಿ ಬಂದ ಸಂದರ್ಭ ಕಾವೇರಿ ನದಿಯಲ್ಲಿ ಪ್ರವಾಹವಿದ್ದು ಜಲಾವೃತ ನದಿಗೆ ಬಾಗಿನ ಹರಕೆ ಸಲ್ಲಿಸುತ್ತಾಳೆ. ಬಳಿಕ ಪ್ರವಾಹ ಇಳಿಮುಖಗೊಂಡಿದ್ದು ಆಕೆ ತವರಿಗೆ ತೆರಳುವಂತಾಯಿತು.ಈ ಹಿನ್ನೆಲೆಯಲ್ಲಿ ಪ್ರತಿವರ್ಷ ನದಿಗೆ ಬಾಗಿನ ಅರ್ಪಿಸುವ ಸಂಪ್ರದಾಯ ನಡೆಸಲಾಗುತ್ತಿದೆ. </p><p>ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರುತ್ತಿರುವುದು ವಾಡಿಕೆ. ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಿಶೇಷವಾಗಿ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>