ಬೆಂಗಳೂರು: ‘ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಆ ಚುನಾವಣೆಯನ್ನು ರದ್ದುಗೊಳಿಸಿ ಮತ್ತೊಮ್ಮೆ ಚುನಾವಣೆ ನಡೆಸಬೇಕು’ ಎಂದು ವಕೀಲ ಎಂ.ಎಚ್. ಚಂದ್ರಶೇಖರ್ ಒತ್ತಾಯಿಸಿದರು.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಸಹ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಆದರೆ, ಮತ ಚಲಾಯಿಸಲು ನನಗೆ ಅವಕಾಶವನ್ನೇ ನೀಡಲಿಲ್ಲ. ನಿಯಮಗಳನ್ನು ಮೀರಿ ಜಾತಿ, ಹಣ ಹಾಗೂ ಉಡುಗೊರೆಗಳನ್ನು ನೀಡುವ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು’ ಎಂದು ಆರೋಪಿಸಿದರು.