<p><strong>ಕುಶಾಲನಗರ:</strong> ಸಮೀಪದ ಮುಳ್ಳುಸೋಗೆಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಕಲ್ಕಿ ಮಾನವ ಸೇವಾ ಸಮಿತಿಯಿಂದ ಈಚೆಗೆ ಪೋಷಣ್ ಅಭಿಯಾನ ಯೋಜನೆಯಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.</p>.<p>ಸೇವಾ ಸಮಿತಿ ಅಧ್ಯಕ್ಷೆ ಇನಿತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ತಾಯಿ ಆರೋಗ್ಯವಾಗಿದ್ದರೆ ಆರೋಗ್ಯವಂತ ಮಗು ಜನಿಸುತ್ತದೆ. ಗರ್ಭಿಣಿಯರು ಸಕಾರಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ, ದುಗುಡದಿಂದ ಕೂಡಿರಬಾರದು’ ಎಂದರು.</p>.<p>ಅಂಗನವಾಡಿ ಕಾರ್ಯಕರ್ತೆ ಪುಟ್ಟಮ್ಮ ಮಾತನಾಡಿ, ‘ಗರ್ಭಿಣಿಯರು ಟಿವಿ ವೀಕ್ಷಣೆಯಿಂದ ದೂರವಿರಬೇಕು. ಅದು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ. ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕಿದೆ. ಪೌಷ್ಟಿಕ ಆಹಾರ ಸೇವಿಸುವುದು ಅತ್ಯಗತ್ಯವಾಗಿದೆ’ ಎಂದು ಹೇಳಿದರು.</p>.<p>ನಂತರ ಸರ್ಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.</p>.<p>ಕಾರ್ಯಕರ್ತೆಯರಾದ ಸುಚಿತ್ರಾ, ನೀಲಮ್ಮ ಟಿ.ಎಸ್, ನಾಗರತ್ನ, ಸೌಮ್ಯಾ, ಸಹಾಯಕಿ ಸರಸ್ವತಿ, ಕಲ್ಕಿ ಮಾನವ ಸೇವಾ ಸಮಿತಿಯ ಪ್ರಮುಖರಾದ ವಸಂತಿ ಪೊನ್ನಪ್ಪ, ತಾರಾ ಟಿಪ್ಪು, ಕನಕ, ರಾಜಪ್ಪ, ಕುಸುಮಾ, ದರ್ಶನ್, ಸಮುದಾಯದ ಆರೋಗ್ಯ ಅಧಿಕಾರಿ ಮಮತಾ, ಆಶಾ ಕಾರ್ಯಕರ್ತೆ ಉಷಾಭಾಯಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಸಮೀಪದ ಮುಳ್ಳುಸೋಗೆಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಕಲ್ಕಿ ಮಾನವ ಸೇವಾ ಸಮಿತಿಯಿಂದ ಈಚೆಗೆ ಪೋಷಣ್ ಅಭಿಯಾನ ಯೋಜನೆಯಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.</p>.<p>ಸೇವಾ ಸಮಿತಿ ಅಧ್ಯಕ್ಷೆ ಇನಿತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ತಾಯಿ ಆರೋಗ್ಯವಾಗಿದ್ದರೆ ಆರೋಗ್ಯವಂತ ಮಗು ಜನಿಸುತ್ತದೆ. ಗರ್ಭಿಣಿಯರು ಸಕಾರಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ, ದುಗುಡದಿಂದ ಕೂಡಿರಬಾರದು’ ಎಂದರು.</p>.<p>ಅಂಗನವಾಡಿ ಕಾರ್ಯಕರ್ತೆ ಪುಟ್ಟಮ್ಮ ಮಾತನಾಡಿ, ‘ಗರ್ಭಿಣಿಯರು ಟಿವಿ ವೀಕ್ಷಣೆಯಿಂದ ದೂರವಿರಬೇಕು. ಅದು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ. ಮಾನಸಿಕ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕಿದೆ. ಪೌಷ್ಟಿಕ ಆಹಾರ ಸೇವಿಸುವುದು ಅತ್ಯಗತ್ಯವಾಗಿದೆ’ ಎಂದು ಹೇಳಿದರು.</p>.<p>ನಂತರ ಸರ್ಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.</p>.<p>ಕಾರ್ಯಕರ್ತೆಯರಾದ ಸುಚಿತ್ರಾ, ನೀಲಮ್ಮ ಟಿ.ಎಸ್, ನಾಗರತ್ನ, ಸೌಮ್ಯಾ, ಸಹಾಯಕಿ ಸರಸ್ವತಿ, ಕಲ್ಕಿ ಮಾನವ ಸೇವಾ ಸಮಿತಿಯ ಪ್ರಮುಖರಾದ ವಸಂತಿ ಪೊನ್ನಪ್ಪ, ತಾರಾ ಟಿಪ್ಪು, ಕನಕ, ರಾಜಪ್ಪ, ಕುಸುಮಾ, ದರ್ಶನ್, ಸಮುದಾಯದ ಆರೋಗ್ಯ ಅಧಿಕಾರಿ ಮಮತಾ, ಆಶಾ ಕಾರ್ಯಕರ್ತೆ ಉಷಾಭಾಯಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>