ಮಸಗೋಡು ಗ್ರಾಮದಿಂದ ಕಣಿವೆಗೆ ಸಂಪರ್ಕಿಸುವ ಮಾರ್ಗದ ಕಾಮಗಾರಿ ನಡೆಸುತ್ತಿರುವುದರಿಂದ ಆ ರಸ್ತೆಯನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ, ಇಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಈ ಹಿಂದಿನಿಂದಲೂ ಗಣಿಗಾರಿಕೆ ಲಾರಿಗಳು ಸಂಚರಿಸುತ್ತಿವೆ. ಸೋಮವಾರಪೇಟೆ ಮತ್ತು ಮಡಿಕೇರಿ ಲೋಕೋಪಯೋಗಿ ಇಲಾಖೆಗೆ ರಸ್ತೆ ಸರಿಪಡಿಸಲು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಗ್ರಾಮ ಪಂಚಾಯಿತಿ ಜನಸಂಪರ್ಕ ಸಭೆ ಇರುವುದರಿಂದ ಭಾರಿ ಗುಂಡಿಗಳನ್ನು ಗಣಿಗಾರಿಕೆಯವರೇ ಜಲ್ಲಿಪುಡಿ ತಂದು ಮುಚ್ಚುತ್ತಿದ್ದಾರೆ. 10 ಚಕ್ರಗಳ ಟಿಪ್ಪರ್ ಇಲ್ಲಿನ ಸಂಚಾರಕ್ಕೆ ನಿಷೇಧವಿದ್ದರೂ, ಎಗ್ಗಿಲ್ಲದೆ ಸಾಗುತ್ತಿವೆ. ರಸ್ತೆ ಮಾಡಿದ ಗುತ್ತಿಗೆದಾರರಿಗೆ 5 ವರ್ಷಗಳ ನಿರ್ವಹಣೆ ಮಾಡಬೇಕಿದ್ದರೂ, ನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದಾರೆ.