ತಜ್ಞರಾದ ಕಪಿಲ್ ಸಿಂಗ್ ಹಾಗೂ ಕಮಲ್ ಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಬೆಟ್ಟದ ಮೇಲೆ ಉಂಟಾದ ಬಿರುಕು, ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಅನಗತ್ಯ ಮಾನವ ಹಸ್ತಕ್ಷೇಪ, ಅಧಿಕ ಮಳೆಯಿಂದ ಭೂಕುಸಿತವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. 2015-16 ಹಾಗೂ 2016–17ನೇ ಸಾಲಿನಲ್ಲಿ ನಿರ್ಮಿಸಿದ್ದ ಇಂಗುಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚುವಂತೆಯೂ ಭಾಗಮಂಡಲದಲ್ಲಿ ನಡೆದಿದ್ದ ಈ ಹಿಂದೆ ನಡೆದಿದ್ದ ಸಭೆಯಲ್ಲೂ ನಿರ್ಣಯ ಕೈಗೊಳ್ಳಲಾಗಿತ್ತು.