ವಿದ್ಯುತ್ ತಂತಿಗಳಿಗೆ ಅಡಚಣೆ ಆಗುವ ಮರದ ಕೊಂಬೆ, ರೆಂಬೆಗಳನ್ನು ಕತ್ತರಿಸದೆ ಜೋತು ಬಿದ್ದ ತಂತಿಗಳನ್ನು ಸರಿಪಡಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡಾಗ, ಕಂಬದಿಂದ ತಂತಿ ತುಂಡಾದಾಗ, ರಸ್ತೆ ಬದಿಯ ಕಂಬಕ್ಕೆ ವಾಹನಗಳು ಡಿಕ್ಕಿಯಾದಾಗ ಮತ್ತು ತುರ್ತು ಸಂದರ್ಭಗಳಲ್ಲಿ ಇವರು ಗ್ರಾಮಸ್ಥರ ಕರೆಗಳನ್ನು ಸ್ವೀಕರಿಸುವುದಿಲ್ಲ. ಬೆಳಿಗ್ಗೆ 10 ಗಂಟೆಗೆ ವಿದ್ಯುತ್ ನೀಡಿ ಸಂಜೆ 6 ಗಂಟೆಗೆ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಮಾನಸಿಕ ಹಿಂಸೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.