ಸಿದ್ದಾಪುರ: ಸಿದ್ದಾಪುರ- ವಿರಾಜಪೇಟೆಗೆ ತೆರಳುವ ರಾಜ್ಯ ಹೆದ್ದಾರಿಯ ಡಾಂಬರೀಕರಣ ಸೋಮವಾರ ಆರಂಭಗೊಂಡಿತು. ಅಮ್ಮತ್ತಿ ಕಾವಾಡಿಯಿಂದ ಆನಂದಪುರದವರೆಗೆ ಕಾಮಗಾರಿ ನಡೆಯುತ್ತಿದೆ.
ಇಷ್ಟು ದಿನಗಳಿಂದ ಭಾರಿ ಗುಂಡಿಗಳಿಂದ ಕೂಡಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಸಮಾಧಾನಪಡುವಂತಾಗಿದೆ. ಕಾಮಗಾರಿ ಬೇಗ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ರಸ್ತೆಯ ಅವ್ಯವಸ್ಥೆಯ ಬಗ್ಗೆ ‘ಪ್ರಜಾವಾಣಿ’ನ. 8ರಂದು ‘ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯೇ ಹೊಂಡಮಯ: ಪ್ರಯಾಣಿಕರ ಗೋಳು ಕೇಳುವವರಿಲ್ಲ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.