‘ಎರಡು ಅವಧಿಯಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕ್ಷೇತ್ರದ ಜನರ ಸೇವೆ ಮಾಡಿದ್ದೇನೆ. ನನ್ನ ಕೆಲಸದ ಶೇ 10ರಷ್ಟನ್ನಾದರೂ ಹಿಂದಿನ ಯಾವ ಸಂಸದರೂ ಮಾಡಿರಲಿಲ್ಲ ಎಂಬುದನ್ನು ತಿಳಿಸುತ್ತಿದ್ದೇನೆ. ಅಭಿವೃದ್ಧಿಗಾಗಿ ನರೇಂದ್ರ ಮೋದಿ ಸರ್ಕಾರವನ್ನು ಮತ್ತೊಮ್ಮೆ ತರಬೇಕೆಂದು ಕೋರಿಕೊಳ್ಳುತ್ತಿದ್ದೇವೆ’ ಎಂದು ಪ್ರತಾಪ ಸಿಂಹ ಪ್ರತಿಕ್ರಿಯಿಸಿದರು.
ಮಠಾಧೀಶರು, ಪ್ರಮುಖರಿಗೆ ವಿತರಣೆ ಹಳ್ಳಿಗಳಲ್ಲೂ ನಡೆಯುತ್ತಿದೆ ಪ್ರಚಾರ ಕಾಂಗ್ರೆಸ್, ಜೆಡಿಎಸ್ನಲ್ಲಿ ಕಾಣದ ಚಟುವಟಿಕೆ
‘ಜನರಿಗೆ ತಿಳಿಸುತ್ತಿದ್ದೇವೆ’ ‘ಚುನಾವಣೆ ನೀತಿಸಂಹಿತೆ ಜಾರಿಯಾದರೆ ಮುದ್ರಣ ವೆಚ್ಚವನ್ನು ಅಭ್ಯರ್ಥಿಯ ವೆಚ್ಚದ ಲೆಕ್ಕಕ್ಕೆ ಸೇರಿಸುವುದರಿಂದ ಈಗಲೇ ವರದಿಯನ್ನು ಹಂಚಿ ಪ್ರಚಾರ ನಡೆಸಲಾಗುತ್ತಿದೆ. ಅಭ್ಯರ್ಥಿ ಯಾರಾದರೂ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸುವುದು ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ’ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದರು.