<p><strong>ಕುಶಾಲನಗರ:</strong> ಗರ್ಭಿಣಿಯರು ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು. ಇದರಿಂದ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ ಮೂರ್ತಿ ಹೇಳಿದರು.</p>.<p>ಪಟ್ಟಣದ ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಗರ್ಭಿಣಿಯರಿಗೆ ಹಮ್ಮಿಕೊಂಡಿದ್ದ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರ ಗರ್ಭಿಣಿಯರ ದೈಹಿಕ ಆರೋಗ್ಯ ಕಾಪಾಡಲು ಈ ಕಾರ್ಯಕ್ರಮ ಆಯೋಜಿಸಿದೆ. ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ. ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು ಎಂದರು.</p>.<p>ಗುಮ್ಮನಕೊಲ್ಲಿ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಮಮತಾ ಮಾತನಾಡಿ, ಗರ್ಭಿಣಿಯರು ಅಪೌಷ್ಟಿಕ ಆಹಾರ ಸೇವನೆ ಮಾಡಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಗರ್ಭಿಣಿಯರ ಆರೈಕೆ, ಆರೋಗ್ಯ, ವಿಶ್ರಾಂತಿ, ವ್ಯಾಯಾಮ ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಮತಾ ಮಾಹಿತಿ ನೀಡಿದರು.</p>.<p>ಗರ್ಭಿಣಿಯರಿಗೆ ಅರಿಶಿಣ, ಕುಂಕುಮ ಹಚ್ಚಿ, ಬಳೆ ತೊಡಿಸಿ ಶಾಸ್ತ್ರೋಕ್ತವಾಗಿ ಸೀಮಂತ ಮಾಡಲಾಯಿತು.<br /> ಇದೇ ಸಂದರ್ಭ 6 ತಿಂಗಳ ಮಕ್ಕಳಿಗೆ ಅನ್ನಭ್ಯಾಸ ಹಾಗೂ 3 ವರ್ಷದ ಮಕ್ಕಳಿಗೆ ಅಕ್ಷರಭ್ಯಾಸ ನಡೆಸಲಾಯಿತು.</p>.<p>ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ನಂದಿನಿ, ಅಂಗನವಾಡಿ ಕಾರ್ಯಕರ್ತೆರಾದ ಪುಟ್ಟಮ್ಮ, ನೀಲಮ್ಮ, ಚಂದ್ರಿಕಾ, ನಾಗರತ್ನ, ಕವಿತಾ, ನಾಗಮಣಿ, ಸರಸ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಗರ್ಭಿಣಿಯರು ಪೌಷ್ಟಿಕ ಹಾಗೂ ಸಮತೋಲನ ಆಹಾರ ಸೇವಿಸಬೇಕು. ಇದರಿಂದ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಂತರಾಗಿರಲು ಸಾಧ್ಯ ಎಂದು ಕೂಡಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಿಕಾ ಮೂರ್ತಿ ಹೇಳಿದರು.</p>.<p>ಪಟ್ಟಣದ ಗುಮ್ಮನಕೊಲ್ಲಿಯ ವಿನಾಯಕ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಗರ್ಭಿಣಿಯರಿಗೆ ಹಮ್ಮಿಕೊಂಡಿದ್ದ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರ ಗರ್ಭಿಣಿಯರ ದೈಹಿಕ ಆರೋಗ್ಯ ಕಾಪಾಡಲು ಈ ಕಾರ್ಯಕ್ರಮ ಆಯೋಜಿಸಿದೆ. ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಕೊಡಬೇಕಿದೆ. ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು ಎಂದರು.</p>.<p>ಗುಮ್ಮನಕೊಲ್ಲಿ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಮಮತಾ ಮಾತನಾಡಿ, ಗರ್ಭಿಣಿಯರು ಅಪೌಷ್ಟಿಕ ಆಹಾರ ಸೇವನೆ ಮಾಡಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಗರ್ಭಿಣಿಯರ ಆರೈಕೆ, ಆರೋಗ್ಯ, ವಿಶ್ರಾಂತಿ, ವ್ಯಾಯಾಮ ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಮತಾ ಮಾಹಿತಿ ನೀಡಿದರು.</p>.<p>ಗರ್ಭಿಣಿಯರಿಗೆ ಅರಿಶಿಣ, ಕುಂಕುಮ ಹಚ್ಚಿ, ಬಳೆ ತೊಡಿಸಿ ಶಾಸ್ತ್ರೋಕ್ತವಾಗಿ ಸೀಮಂತ ಮಾಡಲಾಯಿತು.<br /> ಇದೇ ಸಂದರ್ಭ 6 ತಿಂಗಳ ಮಕ್ಕಳಿಗೆ ಅನ್ನಭ್ಯಾಸ ಹಾಗೂ 3 ವರ್ಷದ ಮಕ್ಕಳಿಗೆ ಅಕ್ಷರಭ್ಯಾಸ ನಡೆಸಲಾಯಿತು.</p>.<p>ಆಯುರ್ವೇದ ಆಸ್ಪತ್ರೆ ವೈದ್ಯಾಧಿಕಾರಿ ನಂದಿನಿ, ಅಂಗನವಾಡಿ ಕಾರ್ಯಕರ್ತೆರಾದ ಪುಟ್ಟಮ್ಮ, ನೀಲಮ್ಮ, ಚಂದ್ರಿಕಾ, ನಾಗರತ್ನ, ಕವಿತಾ, ನಾಗಮಣಿ, ಸರಸ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>