ಗೌರಿ, ಗಣೇಶ ಮಣ್ಣಿನ ಮೂರ್ತಿ ಭಾನುವಾರವೇ ಕೊಂಡೊಯ್ಯುತ್ತಿರುವುದು ಕಂಡು ಬಂತು. ಎಲ್ಲೆಡೆ ಪರಿಸರ ಪೂರಕ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದು, ಎಲ್ಲಿಯೂ ಪಿಒಪಿ ಮೂರ್ತಿ ಕಂಡುಬರಲಿಲ್ಲ. ಸೋಮವಾರ ಬೆಳಿಗ್ಗೆಯಿಂದಲೇ ಹಬ್ಬದ ಕಾರ್ಯ ಪ್ರಾರಂಭವಾಗುತ್ತಿದ್ದು, ಮಧ್ಯಾಹ್ನ 12ರ ಒಳಗೆ ಹೆಚ್ಚಿನ ಮೂರ್ತಿಗಳ ಪ್ರತಿಷ್ಠಾಪನೆ ಪೂರ್ಣಗೊಳ್ಳಲಿದೆ.