<p><strong>ಮಡಿಕೇರಿ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗಾಗಿ ಕೊಡಗು ಜಿಲ್ಲೆ ಸಜ್ಜಾಗುತ್ತಿದೆ. ಸೆ. 15ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಮಾತ್ರವಲ್ಲ, ವಿವಿಧ ಸ್ಪರ್ಧೆಗಳಿಗೆ ಚಾಲನೆಯನ್ನೂ ನೀಡಲಿದ್ದಾರೆ.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚಿತ್ರಕಲಾ ಸ್ಪರ್ಧೆ, ಛಾಯಾಗ್ರಹಣ ಸ್ಪರ್ಧೆ ಹಾಗೂ ಭಾಷಣಸ್ಪರ್ಧೆಗಳು ನಡೆಯಲಿವೆ.</p>.<p>‘ನನ್ನ ಮತ ನನ್ನ ಹಕ್ಕು’ ವಿಷಯ ಕುರಿತು ಚಿತ್ರಕಲೆ ಸ್ಪರ್ಧೆಯು 6–8 ನೇ ತರಗತಿ ಮತ್ತು 9–12ನೇ ತರಗತಿ ವಿಭಾಗದಲ್ಲಿ ನಡೆಯಲಿದೆ. ಇದೇ ವಿಷಯ ಕುರಿತು ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆಯೂ ಇರಲಿದೆ. ಛಾಯಾಚಿತ್ರಗಳನ್ನು https://democracydaykarnataka.in ಗೆ ಅಪ್ಲೋಡ್ ಮಾಡಬೇಕಿದೆ. ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗಾಗಿ ‘ನನ್ನ ಮತ ನನ್ನ ಹಕ್ಕು’, ‘ಭಾರತ ಸಂವಿಧಾನದ ಪೀಠಿಕೆಯ ಮಹತ್ವ’, ‘ಮಹಾತ್ಮ ಗಾಂಧೀಜಿ ಅವರ ದೃಷ್ಟಿಕೋನದಲ್ಲಿ ಗಾಂಧಿ ಭಾರತ’– ಈ 3 ವಿಷಯದಲ್ಲಿ ಒಂದು ವಿಷಯ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ.</p>.<p>ಈ ಮೂರೂ ಸ್ಪರ್ಧೆಗಳಲ್ಲೂ ತಾಲ್ಲೂಕುಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹ 15 ಸಾವಿರ, ದ್ವಿತೀಯ ₹ 10 ಸಾವಿರ ಹಾಗೂ ತೃತೀಯ ಬಹುಮಾನ ₹ 5 ಸಾವಿರ ಇರಲಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ₹ 25 ಸಾವಿರ, ದ್ವಿತೀಯ ₹ 15 ಸಾವಿರ ಹಾಗೂ ತೃತೀಯ ಬಹುಮಾನ ₹ 10 ಸಾವಿರ ಇರಲಿದೆ. ರಾಜ್ಯಮಟ್ಟದಲ್ಲಿ ಪ್ರಥಮ ₹ 1 ಲಕ್ಷ, ದ್ವಿತೀಯ ₹ 50 ಸಾವಿರ ಹಾಗೂ ತೃತೀಯ ಬಹುಮಾನ ₹ 25 ಸಾವಿರ ಇರಲಿದೆ.</p>.<p>ಸಚಿವ ಎನ್.ಎಸ್.ಭೋಸರಾಜು ಅವರು ಈ ಸ್ಪರ್ಧೆಗಳಿಗೆ ಚಾಲನೆ ನೀಡಿದ ನಂತರ ಆಯಾ ಮಟ್ಟದಲ್ಲಿ ಈ ಎಲ್ಲ ಸ್ಪರ್ಧೆಗಳನ್ನೂ ಅ. 31ರ ಒಳಗೆ ಮುಗಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಸ್ಪರ್ಧೆಗಳ ಬಹುಮಾನಗಳನ್ನು ನ. 14ರಂದು ವಿತರಣೆಯಾಗಲಿದ್ದು, ರಾಜ್ಯಮಟ್ಟದ ವಿಜೇತರಿಗೆ ನ. 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಬೈಕ್ ಜಾಥಾ ಇಂದು ಸೈಕಲ್ ಜಾಥಾ ನಾಳೆ</strong> </p><p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಸೆ. 15ರಂದು ಬೆಳಿಗ್ಗೆ 7.30ಕ್ಕೆ ಸೈಕಲ್ ಜಾಥ ನಡೆಯಲಿದೆ. ಸೆ. 14ರಂದು ಮಧ್ಯಾಹ್ನ 1 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬೈಕ್ ಜಾಥಾಗೆ ಚಾಲನೆ ದೊರೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗಾಗಿ ಕೊಡಗು ಜಿಲ್ಲೆ ಸಜ್ಜಾಗುತ್ತಿದೆ. ಸೆ. 15ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಮಾತ್ರವಲ್ಲ, ವಿವಿಧ ಸ್ಪರ್ಧೆಗಳಿಗೆ ಚಾಲನೆಯನ್ನೂ ನೀಡಲಿದ್ದಾರೆ.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಚಿತ್ರಕಲಾ ಸ್ಪರ್ಧೆ, ಛಾಯಾಗ್ರಹಣ ಸ್ಪರ್ಧೆ ಹಾಗೂ ಭಾಷಣಸ್ಪರ್ಧೆಗಳು ನಡೆಯಲಿವೆ.</p>.<p>‘ನನ್ನ ಮತ ನನ್ನ ಹಕ್ಕು’ ವಿಷಯ ಕುರಿತು ಚಿತ್ರಕಲೆ ಸ್ಪರ್ಧೆಯು 6–8 ನೇ ತರಗತಿ ಮತ್ತು 9–12ನೇ ತರಗತಿ ವಿಭಾಗದಲ್ಲಿ ನಡೆಯಲಿದೆ. ಇದೇ ವಿಷಯ ಕುರಿತು ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಛಾಯಾಗ್ರಹಣ ಸ್ಪರ್ಧೆಯೂ ಇರಲಿದೆ. ಛಾಯಾಚಿತ್ರಗಳನ್ನು https://democracydaykarnataka.in ಗೆ ಅಪ್ಲೋಡ್ ಮಾಡಬೇಕಿದೆ. ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗಾಗಿ ‘ನನ್ನ ಮತ ನನ್ನ ಹಕ್ಕು’, ‘ಭಾರತ ಸಂವಿಧಾನದ ಪೀಠಿಕೆಯ ಮಹತ್ವ’, ‘ಮಹಾತ್ಮ ಗಾಂಧೀಜಿ ಅವರ ದೃಷ್ಟಿಕೋನದಲ್ಲಿ ಗಾಂಧಿ ಭಾರತ’– ಈ 3 ವಿಷಯದಲ್ಲಿ ಒಂದು ವಿಷಯ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ.</p>.<p>ಈ ಮೂರೂ ಸ್ಪರ್ಧೆಗಳಲ್ಲೂ ತಾಲ್ಲೂಕುಮಟ್ಟದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹ 15 ಸಾವಿರ, ದ್ವಿತೀಯ ₹ 10 ಸಾವಿರ ಹಾಗೂ ತೃತೀಯ ಬಹುಮಾನ ₹ 5 ಸಾವಿರ ಇರಲಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ₹ 25 ಸಾವಿರ, ದ್ವಿತೀಯ ₹ 15 ಸಾವಿರ ಹಾಗೂ ತೃತೀಯ ಬಹುಮಾನ ₹ 10 ಸಾವಿರ ಇರಲಿದೆ. ರಾಜ್ಯಮಟ್ಟದಲ್ಲಿ ಪ್ರಥಮ ₹ 1 ಲಕ್ಷ, ದ್ವಿತೀಯ ₹ 50 ಸಾವಿರ ಹಾಗೂ ತೃತೀಯ ಬಹುಮಾನ ₹ 25 ಸಾವಿರ ಇರಲಿದೆ.</p>.<p>ಸಚಿವ ಎನ್.ಎಸ್.ಭೋಸರಾಜು ಅವರು ಈ ಸ್ಪರ್ಧೆಗಳಿಗೆ ಚಾಲನೆ ನೀಡಿದ ನಂತರ ಆಯಾ ಮಟ್ಟದಲ್ಲಿ ಈ ಎಲ್ಲ ಸ್ಪರ್ಧೆಗಳನ್ನೂ ಅ. 31ರ ಒಳಗೆ ಮುಗಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಸ್ಪರ್ಧೆಗಳ ಬಹುಮಾನಗಳನ್ನು ನ. 14ರಂದು ವಿತರಣೆಯಾಗಲಿದ್ದು, ರಾಜ್ಯಮಟ್ಟದ ವಿಜೇತರಿಗೆ ನ. 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಬೈಕ್ ಜಾಥಾ ಇಂದು ಸೈಕಲ್ ಜಾಥಾ ನಾಳೆ</strong> </p><p>ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಸೆ. 15ರಂದು ಬೆಳಿಗ್ಗೆ 7.30ಕ್ಕೆ ಸೈಕಲ್ ಜಾಥ ನಡೆಯಲಿದೆ. ಸೆ. 14ರಂದು ಮಧ್ಯಾಹ್ನ 1 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬೈಕ್ ಜಾಥಾಗೆ ಚಾಲನೆ ದೊರೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>