ಕಲಬುರ್ಗಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸರಿ ಉತ್ತರ ಬರೆಯಲು ನೆರವಾಗುತ್ತಿದ್ದ ಆರೋಪದ ಮೇಲೆ ಇಲ್ಲಿನ ನ್ಯಾಷನಲ್ ಕಾಲೇಜು ಪ್ರಾಂಶುಪಾಲರನ್ನು ಪೊಲೀಸರು ಸೋಮವಾರ ಬಂಧಿಸಿ, ಬಿಡುಗಡೆ ಮಾಡಿದರು.
‘ಪ್ರಾಂಶುಪಾಲರಾದ ರೆಹನಾ ಬೇಗಂ ಅವರು ಹಣ ಕೊಟ್ಟ ಅಭ್ಯರ್ಥಿಗಳಿಗೆ ಸರಿ ಉತ್ತರ ಬರೆಯಲು ನೆರವಾಗುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಅವರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಕಾರಣ ಅವರಿಂದ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.