<p><strong>ಮಡಿಕೇರಿ:</strong> ಪಿಯು ಕಾಲೇಜುಗಳ ಶುಲ್ಕ ಹೆಚ್ಚಳದ ಪ್ರಸ್ತಾವವನ್ನು ಪಿಯು ಇಲಾಖೆ ಸರ್ಕಾರದ ಮುಂದಿರಿಸಿದೆ. ಕಾಲೇಜು ಸಂಯೋಜಕತ್ವ ಶುಲ್ಕವನ್ನೂ ಸಹ ಹೆಚ್ಚಿಸಬೇಕು ಹಾಗೂ 3 ವರ್ಷಕ್ಕೊಮ್ಮೆ ಶುಲ್ಕ ಹೆಚ್ಚಳ ಮಾಡಬೇಕು ಎಂದು ಇಲಾಖೆ ಬೇಡಿಕೆಯನ್ನಿಟ್ಟಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವವನ್ನು ಸಾರಸಗಟಾಗಿ ತಿರಸ್ಕರಿಸಬೇಕು ಎಂದು ಎಐಡಿಎಸ್ಒ ರಾಜ್ಯ ಸಮಿತಿ ಆಗ್ರಹಿಸಿದೆ.</p>.<p>ಪಿಯು ಕಾಲೇಜುಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶುಲ್ಕದ ಹಣದಿಂದ ಆದಾಯ ಪಡೆದಲ್ಲಿ, ಸರ್ಕಾರಿ ಕಾಲೇಜುಗಳಿಗೂ, ಖಾಸಗಿ ಕಾಲೇಜುಗಳಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ. ಹಣಕಾಸು ಕೊರತೆಯ ನೆಪವೊಡ್ಡಿ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈ ರೀತಿ ಶುಲ್ಕ ಹೆಚ್ಚಿಸುತ್ತಾ ಹೋಗುತ್ತಿರುವುದು ಸರಿಯಲ್ಲ ಎಂದು ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಸುಭಾಷ್ ಖಂಡಿಸಿದ್ದಾರೆ.</p>.<p>ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಈಗಾಗಲೇ ಎಲ್ಲ ಹಂತಗಳಲ್ಲಿ ವಿದ್ಯಾಭ್ಯಾಸ ತೊರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಉನ್ನತ ಶಿಕ್ಷಣದ ಶುಲ್ಕ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿಯೇ ದುಬಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳದ ಪ್ರಸ್ತಾವಕ್ಕೆ ಸರ್ಕಾರ ಅನುಮೋದನೆ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಪಿಯು ಕಾಲೇಜುಗಳ ಶುಲ್ಕ ಹೆಚ್ಚಳದ ಪ್ರಸ್ತಾವವನ್ನು ಪಿಯು ಇಲಾಖೆ ಸರ್ಕಾರದ ಮುಂದಿರಿಸಿದೆ. ಕಾಲೇಜು ಸಂಯೋಜಕತ್ವ ಶುಲ್ಕವನ್ನೂ ಸಹ ಹೆಚ್ಚಿಸಬೇಕು ಹಾಗೂ 3 ವರ್ಷಕ್ಕೊಮ್ಮೆ ಶುಲ್ಕ ಹೆಚ್ಚಳ ಮಾಡಬೇಕು ಎಂದು ಇಲಾಖೆ ಬೇಡಿಕೆಯನ್ನಿಟ್ಟಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವವನ್ನು ಸಾರಸಗಟಾಗಿ ತಿರಸ್ಕರಿಸಬೇಕು ಎಂದು ಎಐಡಿಎಸ್ಒ ರಾಜ್ಯ ಸಮಿತಿ ಆಗ್ರಹಿಸಿದೆ.</p>.<p>ಪಿಯು ಕಾಲೇಜುಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿದ್ಯಾರ್ಥಿಗಳ ಶುಲ್ಕದ ಹಣದಿಂದ ಆದಾಯ ಪಡೆದಲ್ಲಿ, ಸರ್ಕಾರಿ ಕಾಲೇಜುಗಳಿಗೂ, ಖಾಸಗಿ ಕಾಲೇಜುಗಳಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ. ಹಣಕಾಸು ಕೊರತೆಯ ನೆಪವೊಡ್ಡಿ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈ ರೀತಿ ಶುಲ್ಕ ಹೆಚ್ಚಿಸುತ್ತಾ ಹೋಗುತ್ತಿರುವುದು ಸರಿಯಲ್ಲ ಎಂದು ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಸುಭಾಷ್ ಖಂಡಿಸಿದ್ದಾರೆ.</p>.<p>ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಈಗಾಗಲೇ ಎಲ್ಲ ಹಂತಗಳಲ್ಲಿ ವಿದ್ಯಾಭ್ಯಾಸ ತೊರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಉನ್ನತ ಶಿಕ್ಷಣದ ಶುಲ್ಕ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿಯೇ ದುಬಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳದ ಪ್ರಸ್ತಾವಕ್ಕೆ ಸರ್ಕಾರ ಅನುಮೋದನೆ ನೀಡಬಾರದು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>