<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಮಾರ್ಚ್ 31ರ ಮಧ್ಯರಾತ್ರಿಯ ವರೆಗೆ ಸಿಎಲ್-2 ಹಾಗೂ ಸಿಲ್-11(ಸಿ) ಸನ್ನದುಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ರೀತಿಯ ವೈನ್ ಟಾವರಿನ್, ಪಬ್ಗಳು ಹಾಗೂ ಮೈಕ್ರೋಬ್ರೀವರಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಏ.1ರ ವರೆಗೆ ದಾಸೋಹ, ಉರೂಸ್, ಸಂತೆ-ಜಾತ್ರೆ, ಸಾಮೂಹಿಕ ಪ್ರಾರ್ಥನೆ, ಜನ ಒಗ್ಗೂಡುವಿಕೆ ಮುಂತಾದವುಗಳನ್ನು ನಿಷೇಧಿಸಲಾಗಿದೆ.</p>.<p><strong>ನ್ಯಾಯಬೆಲೆ ಅಂಗಡಿಗಳಿಗೆ ರಜೆ:</strong>ಮಾರ್ಚ್ 22ರಂದು ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ರಜೆಯನ್ನು ನೀಡಲಾಗಿದೆ. ಈ ದಿನದ ವಿತರಣೆಯನ್ನು 24ರಂದು ನೀಡಲಾಗುವುದು ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಜಿಲ್ಲೆಯಾದ್ಯಂತ ಮಾರ್ಚ್ 31ರ ಮಧ್ಯರಾತ್ರಿಯ ವರೆಗೆ ಸಿಎಲ್-2 ಹಾಗೂ ಸಿಲ್-11(ಸಿ) ಸನ್ನದುಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ರೀತಿಯ ವೈನ್ ಟಾವರಿನ್, ಪಬ್ಗಳು ಹಾಗೂ ಮೈಕ್ರೋಬ್ರೀವರಿ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಏ.1ರ ವರೆಗೆ ದಾಸೋಹ, ಉರೂಸ್, ಸಂತೆ-ಜಾತ್ರೆ, ಸಾಮೂಹಿಕ ಪ್ರಾರ್ಥನೆ, ಜನ ಒಗ್ಗೂಡುವಿಕೆ ಮುಂತಾದವುಗಳನ್ನು ನಿಷೇಧಿಸಲಾಗಿದೆ.</p>.<p><strong>ನ್ಯಾಯಬೆಲೆ ಅಂಗಡಿಗಳಿಗೆ ರಜೆ:</strong>ಮಾರ್ಚ್ 22ರಂದು ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ರಜೆಯನ್ನು ನೀಡಲಾಗಿದೆ. ಈ ದಿನದ ವಿತರಣೆಯನ್ನು 24ರಂದು ನೀಡಲಾಗುವುದು ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>