<p><strong>ಮಡಿಕೇರಿ:</strong> ‘ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾದ ಜನರ ಸಹಕಾರ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲವನ್ನು ಮನ್ನಾ ಮಾಡುವಂತಾಗಲು ಸರ್ಕಾರಕ್ಕೆ ಕೂಡಲೇ ಪ್ರಸ್ತಾವ ಸಲ್ಲಿಸಿ’ ಎಂದು ಸಂಸದ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೀವ್ರ ಹಾನಿಯಾಗಿದೆ. ಜತೆಗೆ ಇತರ ಪ್ರದೇಶಗಳಲ್ಲಿಯೂ ಬೆಳೆ ಹಾನಿಯಾಗಿದ್ದು, ಮೂರು ತಿಂಗಳವರೆಗೆ ಬೆಳೆ, ಅಲ್ಪಾವಧಿ ಅಥವಾ ಮಧ್ಯಮಾವಧಿ ಸಾಲವನ್ನು ವಸೂಲಿ ಮಾಡಬಾರದು’ ಎಂದು ಸೂಚಿಸಿದರು.</p>.<p>ಬ್ಯಾಂಕುಗಳು ತಮ್ಮ ಸಿಎಸ್ಆರ್ ನಿಧಿಯಿಂದ ಪ್ರಕೃತಿ ವಿಕೋಪಕ್ಕೆ ಆರ್ಥಿಕ ಸಹಾಯ ಮಾಡಬೇಕು ಎಂದು ಪ್ರತಾಪ್ ಸಿಂಹ ಸಲಹೆ ಮಾಡಿದರು.</p>.<p>ಜಿಲ್ಲೆಯಲ್ಲಿ ಕನಿಷ್ಠ ಒಂದು ಸಾವಿರ ಮನೆಗಳು ನಾಶವಾಗಿದ್ದು, ಈ ಕುಟುಂಬಗಳ ಪುನರ್ವಸತಿಗೆ ಅಗತ್ಯ ಸಹಾಯವನ್ನು ಮಾಡಲು ಅನೇಕ ಸಂಘ ಸಂಸ್ಥೆಗಳು ಮುಂದೆ ಬಂದಿವೆ. ಇವರಿಗೆ ಸರ್ಕಾರವು ಜಾಗವನ್ನು ಗುರುತು ಮಾಡಿಕೊಟ್ಟರೆ ಮನೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಆಸ್ತಿ ಪಾಸ್ತಿ ನಷ್ಟಕ್ಕೆ ರಾಜ್ಯದ ಎಲ್ಲಾ ಶಾಸಕರ ನಿಧಿಯಿಂದ ₹ 25 ಲಕ್ಷ ನೀಡಲು ಮನವಿ ಮಾಡಲಾಗಿದೆ, ಅದರಂತೆ ಅಂದಾಜು ₹ 57 ಕೋಟಿ ಶಾಸಕರ ನಿಧಿಯಿಂದ ದೊರೆಯಲಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಅಂದಾಜು ₹ 1,400 ಕೋಟಿ ರೈತರ ಸಾಲ ಇದ್ದು, ಸರ್ಕಾರಕ್ಕೆ ಜಿಲ್ಲೆಯ ಸಂಪೂರ್ಣ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>ತಾತ್ಕಾಲಿಕ ಶೆಡ್ ನಿರ್ಮಾಣದ ಬದಲು ಸಂತ್ರಸ್ತರಾಗಿರುವ ಕುಟುಂಬಗಳಿಗೆ ಪ್ರತೀ ತಿಂಗಳು ಜಿಲ್ಲಾಡಳಿತದಿಂದ ₹ 10 ಸಾವಿರ ಕುಟುಂಬ ನಿರ್ವಹಣೆಗೆ ನೀಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಮನೆ ಕಳೆದುಕೊಂಡ ನಿರಾಶ್ರಿತರಿಗೆ ಆರ್ಯವೈಶ್ಯ ಸಂಘವು ಮನೆ ನಿರ್ಮಾಣ ಮಾಡಿಕೊಡಲು ₹ 2 ಕೋಟಿ ನೆರವು ನೀಡಲು ಮುಂದೆ ಬಂದಿದ್ದು, ಇಂಥವರಿಗೆ ಸರ್ಕಾರವು ಸೂಕ್ತ ಜಾಗ ಒದಗಿಸಿಕೊಟ್ಟರೆ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು.</p>.<p>ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ನಬಾರ್ಡ್ನ ಸಹಾಯಕ ಮಹಾ ಪ್ರಬಂಧಕರಾದ ಮುಂಡಂಡ ಸಿ. ನಾಣಯ್ಯ, ಲೀಡ್ ಬ್ಯಾಂಕ್ ವಿಭಾಗೀಯ ಮುಖ್ಯ ಪ್ರಬಂಧಕ ಎಸ್.ಎಲ್. ಗಣಪತಿ, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾದ ಜನರ ಸಹಕಾರ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲವನ್ನು ಮನ್ನಾ ಮಾಡುವಂತಾಗಲು ಸರ್ಕಾರಕ್ಕೆ ಕೂಡಲೇ ಪ್ರಸ್ತಾವ ಸಲ್ಲಿಸಿ’ ಎಂದು ಸಂಸದ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೀವ್ರ ಹಾನಿಯಾಗಿದೆ. ಜತೆಗೆ ಇತರ ಪ್ರದೇಶಗಳಲ್ಲಿಯೂ ಬೆಳೆ ಹಾನಿಯಾಗಿದ್ದು, ಮೂರು ತಿಂಗಳವರೆಗೆ ಬೆಳೆ, ಅಲ್ಪಾವಧಿ ಅಥವಾ ಮಧ್ಯಮಾವಧಿ ಸಾಲವನ್ನು ವಸೂಲಿ ಮಾಡಬಾರದು’ ಎಂದು ಸೂಚಿಸಿದರು.</p>.<p>ಬ್ಯಾಂಕುಗಳು ತಮ್ಮ ಸಿಎಸ್ಆರ್ ನಿಧಿಯಿಂದ ಪ್ರಕೃತಿ ವಿಕೋಪಕ್ಕೆ ಆರ್ಥಿಕ ಸಹಾಯ ಮಾಡಬೇಕು ಎಂದು ಪ್ರತಾಪ್ ಸಿಂಹ ಸಲಹೆ ಮಾಡಿದರು.</p>.<p>ಜಿಲ್ಲೆಯಲ್ಲಿ ಕನಿಷ್ಠ ಒಂದು ಸಾವಿರ ಮನೆಗಳು ನಾಶವಾಗಿದ್ದು, ಈ ಕುಟುಂಬಗಳ ಪುನರ್ವಸತಿಗೆ ಅಗತ್ಯ ಸಹಾಯವನ್ನು ಮಾಡಲು ಅನೇಕ ಸಂಘ ಸಂಸ್ಥೆಗಳು ಮುಂದೆ ಬಂದಿವೆ. ಇವರಿಗೆ ಸರ್ಕಾರವು ಜಾಗವನ್ನು ಗುರುತು ಮಾಡಿಕೊಟ್ಟರೆ ಮನೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.</p>.<p>ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಆಸ್ತಿ ಪಾಸ್ತಿ ನಷ್ಟಕ್ಕೆ ರಾಜ್ಯದ ಎಲ್ಲಾ ಶಾಸಕರ ನಿಧಿಯಿಂದ ₹ 25 ಲಕ್ಷ ನೀಡಲು ಮನವಿ ಮಾಡಲಾಗಿದೆ, ಅದರಂತೆ ಅಂದಾಜು ₹ 57 ಕೋಟಿ ಶಾಸಕರ ನಿಧಿಯಿಂದ ದೊರೆಯಲಿದೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಅಂದಾಜು ₹ 1,400 ಕೋಟಿ ರೈತರ ಸಾಲ ಇದ್ದು, ಸರ್ಕಾರಕ್ಕೆ ಜಿಲ್ಲೆಯ ಸಂಪೂರ್ಣ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>ತಾತ್ಕಾಲಿಕ ಶೆಡ್ ನಿರ್ಮಾಣದ ಬದಲು ಸಂತ್ರಸ್ತರಾಗಿರುವ ಕುಟುಂಬಗಳಿಗೆ ಪ್ರತೀ ತಿಂಗಳು ಜಿಲ್ಲಾಡಳಿತದಿಂದ ₹ 10 ಸಾವಿರ ಕುಟುಂಬ ನಿರ್ವಹಣೆಗೆ ನೀಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಮನೆ ಕಳೆದುಕೊಂಡ ನಿರಾಶ್ರಿತರಿಗೆ ಆರ್ಯವೈಶ್ಯ ಸಂಘವು ಮನೆ ನಿರ್ಮಾಣ ಮಾಡಿಕೊಡಲು ₹ 2 ಕೋಟಿ ನೆರವು ನೀಡಲು ಮುಂದೆ ಬಂದಿದ್ದು, ಇಂಥವರಿಗೆ ಸರ್ಕಾರವು ಸೂಕ್ತ ಜಾಗ ಒದಗಿಸಿಕೊಟ್ಟರೆ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು.</p>.<p>ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ನಬಾರ್ಡ್ನ ಸಹಾಯಕ ಮಹಾ ಪ್ರಬಂಧಕರಾದ ಮುಂಡಂಡ ಸಿ. ನಾಣಯ್ಯ, ಲೀಡ್ ಬ್ಯಾಂಕ್ ವಿಭಾಗೀಯ ಮುಖ್ಯ ಪ್ರಬಂಧಕ ಎಸ್.ಎಲ್. ಗಣಪತಿ, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>