ಹಾರಂಗಿ ಮೀನುಮರಿ ಉತ್ಪಾದನಾ ಕೇಂದ್ರದ ಸಹಾಯಕ ನಿರ್ದೇಶಕ ಸಚ್ಚಿನ್ ಮಾತನಾಡಿ, ಬಿಸಿಲಿನ ತಾಪಮಾನಕ್ಕೆ ಕಾವೇರಿ ನದಿಯಲ್ಲಿ ನೀರು ಕ್ಷೀಣಿಸುತ್ತಿದೆ. ಈ ಹಿನ್ನಲೆ ಅಳಿವಿನಂಚಿನಲ್ಲಿರುವ ಮೀನುಗಳ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮಹಶೀರ್, ಗೆಂಡೆಮೀನು ಸೇರಿದಂತೆ ಹಲವು ಜಾತಿಯ ಮೀನುಗಳನ್ನು ರಕ್ಷಿಸಲಾಗಿದೆ ಎಂದರು.