ಮಡಿಕೇರಿ: ಅಡುಗೆ ಅನಿಲ ಸಿಲಿಂಡರ್ ಬೆಲೆ ವಿರೋಧಿಸಿ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಇಲ್ಲಿನ ಚೌಕಿಯಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸಿಲಿಂಡರ್ ಹೊತ್ತು ಆಕ್ರೋಶ ವ್ಯಕ್ತಪಡಿಸಿದರು. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಎಂದು ಅವರು ಕಿಡಿಕಾರಿದರು.
ಕಾರ್ಯಕರ್ತರು ಚೌಕಿಯಲ್ಲಿ ಮಾನವ ಸರಪಳಿ ರಚಿಸಿ ವಾಹನ ಸಂಚಾರ ತಡೆದು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ನ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ವೀಣಾ ಅಚ್ಚಯ್ಯ, ಟಿ.ಪಿ.ರಮೇಶ, ತೆನ್ನೀರಾ ಮೈನಾ, ರಾಜೇಶ್ ಯಲ್ಲಪ್ಪ ಇದ್ದರು.