ಜಿ.ಪಂ.ಮಾಜಿ ಸದಸ್ಯ ವಿ.ಪಿ.ಶಶಿಧರ್ ಮಾತನಾಡಿ, ಜನನಿಬಿಡ ಪ್ರದೇಶದಲ್ಲಿ ಸಂಚಾರ ಪೊಲೀಸ್ ಠಾಣೆ ನಿರ್ಮಾಣಗೊಂಡಲ್ಲಿ ಈ ಭಾಗದ ನಿವಾಸಿಗಳ ಸ್ವಸ್ಥತೆ ಹಾಳಾಗುತ್ತದೆ. ಗುಂಡೂರಾವ್ ಬಡಾವಣೆ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳ 1,300 ಕ್ಕೂ ಅಧಿಕ ನಿವೇಶನಗಳ 5 ಸಾವಿರ ಮಂದಿಗೆ ಅನಾನುಕೂಲ ಸೃಷ್ಟಿಯಾಗಲಿದೆ. ಈ ಭಾಗದ ಜನರ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಈ ಸ್ಥಳವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು.