<p><strong>ಮಡಿಕೇರಿ</strong>: ‘ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ, ‘ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನಕ್ಕೆ ತೋರಿದ ಅಗೌರವ’ ಎಂದು ಅವರು ಹರಿಹಾಯ್ದರು.</p>.<p>‘ಈ ಮೂಲಕ ಪರಿಶಿಷ್ಟಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಲು ಹೊರಟಿದೆ’ ಎಂದೂ ಕಿಡಿಕಾರಿದರು.</p>.<p>‘ಸ್ವಾತಂತ್ರ್ಯಪೂರ್ವದಿಂದ ಇಲ್ಲಿಯವರೆಗೂ ಕಾಂಗ್ರೆಸ್ ಇದೇ ರೀತಿಯಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಮಾತನಾಡಿ, ‘ರಾಹುಲ್ ಗಾಂಧಿ ಸಂಸತ್ತಿನಲ್ಲಿ ಚರ್ಚೆ ಮಾಡದೇ, ವಿದೇಶದಲ್ಲಿ ದೇಶದ ಆಂತರಿಕ ವಿಷಯಗಳನ್ನು ಚರ್ಚೆ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>‘ಚೀನಾ ಕುರಿತು ಹೊಗಳಿರುವಂತಹ ರಾಹುಲ್ ಗಾಂಧಿ ಅವರು ಕೂಡಲೇ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ‘ದೇಶದ ಆಂತರಿಕ ವಿಚಾರಗಳನ್ನು ವಿದೇಶದಲ್ಲಿ ಟೀಕಿಸುವ ಇಂತಹವರಿಗೆ ಏನೆಂದು ಹೇಳಬೇಕು’ ಎಂದು ಪ್ರಶ್ನಿಸಿದರು.</p>.<p>‘ವಿರೋಧ ಪಕ್ಷದ ನಾಯಕನಾಗಿ ಎಲ್ಲಿ ಏನು ಮಾತನಾಡಬೇಕು ಎಂಬುದೂ ಗೊತ್ತಿರದ ರಾಹುಲ್ ಗಾಂಧಿ ಅವರನ್ನು ಕೂಡಲೇ ಭಾರತದಿಂದಲೇ ಗಡಿಪಾರು ಮಾಡಬೇಕು’ ಎಂದೂ ಒತ್ತಾಯಿಸಿದರು.</p>.<p>ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರತಿಭಟನಾನಿರತರಿಂದ ಲೋಕಸಭಾ ಸ್ಪೀಕರ್ ಉದ್ದೇಶಿಸಿ ಬರೆದ ಮನವಿ ಪತ್ರ ಸ್ವೀಕರಿಸಿದರು.</p>.<p>ಭಾರತದ ದೇಶದ ಸಂವಿಧಾನ ಅತಿ ಶ್ರೇಷ್ಠವಾದದ್ದು. ರಾಹುಲ್ ಗಾಂಧಿ ಹೇಳಿಕೆಗಳನ್ನು ಗಮನಿಸಿದರೆ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳಿಗೆ ತಿಲಾಂಜಲಿ ಇಡುವ ಹುನ್ನಾರವನ್ನು ಕಾಂಗ್ರೆಸ್ ನಡೆಸಿದೆ ಎಂಬ ಅನುಮಾನ ಬರುತ್ತದೆ ಎಂದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ಈಗ ರಾಹುಲ್ ಗಾಂಧಿ ಅವರೇ ಮೀಸಲಾತಿ ತೆಗೆದು ಹಾಕುವಂತಹ ಅಂತಹ ಮಾತುಗಳನ್ನು ಆಡಿದ್ದಾರೆ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ಅನಿತಾ ಪೂವಯ್ಯ, ಮಹೇಶ್ ಜೈನಿ, ಅರುಣ್ ಕುಮಾರ್, ಉಮೇಶ್ ಸುಬ್ರಮಣಿ, ಮನುಮಂಜುನಾಥ್ ರಾಬಿನ್ ದೇವಯ್ಯ, ಅಫ್ರು ರವೀಂದ್ರ, ಸುವಿನ್ ಗಣಪತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ, ‘ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನಕ್ಕೆ ತೋರಿದ ಅಗೌರವ’ ಎಂದು ಅವರು ಹರಿಹಾಯ್ದರು.</p>.<p>‘ಈ ಮೂಲಕ ಪರಿಶಿಷ್ಟಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಲು ಹೊರಟಿದೆ’ ಎಂದೂ ಕಿಡಿಕಾರಿದರು.</p>.<p>‘ಸ್ವಾತಂತ್ರ್ಯಪೂರ್ವದಿಂದ ಇಲ್ಲಿಯವರೆಗೂ ಕಾಂಗ್ರೆಸ್ ಇದೇ ರೀತಿಯಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಅನ್ಯಾಯ ಮಾಡಿದೆ’ ಎಂದು ಆರೋಪಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ ಮಾತನಾಡಿ, ‘ರಾಹುಲ್ ಗಾಂಧಿ ಸಂಸತ್ತಿನಲ್ಲಿ ಚರ್ಚೆ ಮಾಡದೇ, ವಿದೇಶದಲ್ಲಿ ದೇಶದ ಆಂತರಿಕ ವಿಷಯಗಳನ್ನು ಚರ್ಚೆ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>‘ಚೀನಾ ಕುರಿತು ಹೊಗಳಿರುವಂತಹ ರಾಹುಲ್ ಗಾಂಧಿ ಅವರು ಕೂಡಲೇ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ‘ದೇಶದ ಆಂತರಿಕ ವಿಚಾರಗಳನ್ನು ವಿದೇಶದಲ್ಲಿ ಟೀಕಿಸುವ ಇಂತಹವರಿಗೆ ಏನೆಂದು ಹೇಳಬೇಕು’ ಎಂದು ಪ್ರಶ್ನಿಸಿದರು.</p>.<p>‘ವಿರೋಧ ಪಕ್ಷದ ನಾಯಕನಾಗಿ ಎಲ್ಲಿ ಏನು ಮಾತನಾಡಬೇಕು ಎಂಬುದೂ ಗೊತ್ತಿರದ ರಾಹುಲ್ ಗಾಂಧಿ ಅವರನ್ನು ಕೂಡಲೇ ಭಾರತದಿಂದಲೇ ಗಡಿಪಾರು ಮಾಡಬೇಕು’ ಎಂದೂ ಒತ್ತಾಯಿಸಿದರು.</p>.<p>ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪ್ರತಿಭಟನಾನಿರತರಿಂದ ಲೋಕಸಭಾ ಸ್ಪೀಕರ್ ಉದ್ದೇಶಿಸಿ ಬರೆದ ಮನವಿ ಪತ್ರ ಸ್ವೀಕರಿಸಿದರು.</p>.<p>ಭಾರತದ ದೇಶದ ಸಂವಿಧಾನ ಅತಿ ಶ್ರೇಷ್ಠವಾದದ್ದು. ರಾಹುಲ್ ಗಾಂಧಿ ಹೇಳಿಕೆಗಳನ್ನು ಗಮನಿಸಿದರೆ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳಿಗೆ ತಿಲಾಂಜಲಿ ಇಡುವ ಹುನ್ನಾರವನ್ನು ಕಾಂಗ್ರೆಸ್ ನಡೆಸಿದೆ ಎಂಬ ಅನುಮಾನ ಬರುತ್ತದೆ ಎಂದರು.</p>.<p>ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದು ಹಾಕುತ್ತಾರೆ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ಈಗ ರಾಹುಲ್ ಗಾಂಧಿ ಅವರೇ ಮೀಸಲಾತಿ ತೆಗೆದು ಹಾಕುವಂತಹ ಅಂತಹ ಮಾತುಗಳನ್ನು ಆಡಿದ್ದಾರೆ ಎಂದು ಹೇಳಿದರು.</p>.<p>ಬಿಜೆಪಿ ಮುಖಂಡರಾದ ಅನಿತಾ ಪೂವಯ್ಯ, ಮಹೇಶ್ ಜೈನಿ, ಅರುಣ್ ಕುಮಾರ್, ಉಮೇಶ್ ಸುಬ್ರಮಣಿ, ಮನುಮಂಜುನಾಥ್ ರಾಬಿನ್ ದೇವಯ್ಯ, ಅಫ್ರು ರವೀಂದ್ರ, ಸುವಿನ್ ಗಣಪತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>