<p><strong>ಮಡಿಕೇರಿ</strong>: ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ನಿಂದಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಕುರಿತು ಕೂಡಲೇ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ.</p>.<p>ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಹಳೆಯ ಖಾಸಗಿ ಬಸ್ನಿಲ್ದಾಣದಲ್ಲಿ ಶನಿವಾರ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಿತು.</p>.<p>ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರು ಪತ್ರಕರ್ತೆಯೊಬ್ಬರ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಷಯಕ್ಕೂ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಮಹಿಳೆಯ ಅನುಕೂಲಕ್ಕಾಗಿ ಆಸ್ಪತ್ರೆಗಳ ಕುರಿತು ಪತ್ರಕರ್ತೆ ಪ್ರಶ್ನಿಸಿದರೆ ಅವರ ಕುರಿತೇ ಸಚಿವರೊಬ್ಬರು ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ತಾಯ್ತನದ ಅರಿವಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಬಿಹಾರದಲ್ಲೂ ಪ್ರಧಾನಿಯವರ ತಾಯಿಯ ಬಗ್ಗೆ ಟೀಕಿಸಲಾಗಿದೆ. ಇವುಗಳನ್ನೆಲ್ಲ ನೋಡಿದರೆ ಕಾಂಗ್ರೆಸ್ಗೆ ಮಹಿಳೆಯರ ಬಗ್ಗೆ ಗೌರವ ಇಲ್ಲ ಎಂದು ಅನ್ನಿಸುತ್ತದೆ. ಕೂಡಲೇ, ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಸದಸ್ಯ ಉಮೇಶ್ ಸುಬ್ರಮಣಿ, ಸಬಿತಾ, ಶ್ವೇತಾ ಪ್ರಶಾಂತ, ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡಾದ ರಾಬಿನ್ ದೇವಯ್ಯ, ಜಗದೀಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ನಿಂದಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಕುರಿತು ಕೂಡಲೇ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ.</p>.<p>ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಇಲ್ಲಿನ ಹಳೆಯ ಖಾಸಗಿ ಬಸ್ನಿಲ್ದಾಣದಲ್ಲಿ ಶನಿವಾರ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಿತು.</p>.<p>ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರು ಪತ್ರಕರ್ತೆಯೊಬ್ಬರ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಷಯಕ್ಕೂ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಮಹಿಳೆಯ ಅನುಕೂಲಕ್ಕಾಗಿ ಆಸ್ಪತ್ರೆಗಳ ಕುರಿತು ಪತ್ರಕರ್ತೆ ಪ್ರಶ್ನಿಸಿದರೆ ಅವರ ಕುರಿತೇ ಸಚಿವರೊಬ್ಬರು ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ತಾಯ್ತನದ ಅರಿವಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಬಿಹಾರದಲ್ಲೂ ಪ್ರಧಾನಿಯವರ ತಾಯಿಯ ಬಗ್ಗೆ ಟೀಕಿಸಲಾಗಿದೆ. ಇವುಗಳನ್ನೆಲ್ಲ ನೋಡಿದರೆ ಕಾಂಗ್ರೆಸ್ಗೆ ಮಹಿಳೆಯರ ಬಗ್ಗೆ ಗೌರವ ಇಲ್ಲ ಎಂದು ಅನ್ನಿಸುತ್ತದೆ. ಕೂಡಲೇ, ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಸದಸ್ಯ ಉಮೇಶ್ ಸುಬ್ರಮಣಿ, ಸಬಿತಾ, ಶ್ವೇತಾ ಪ್ರಶಾಂತ, ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡಾದ ರಾಬಿನ್ ದೇವಯ್ಯ, ಜಗದೀಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>