<p><strong>ಸಿದ್ದಾಪುರ: </strong>ಲೈನ್ಮನೆಗಳಲ್ಲಿ ವಾಸವಾಗಿರುವ ಆದಿವಾಸಿಗಳು ಶಾಶ್ವತ ನಿವೇಶನ ಒದಗಿಸಲು ಕೈಗೊಂಡಿರುವ ಅಹೋರಾತ್ರಿ ಹೋರಾಟ ನೂರು ದಿನ ಪೂರೈಸಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ಮೌನ ಅವರಲ್ಲಿ ಆಕ್ರೋಶವನ್ನು ಮಡುಗಟ್ಟಿಸಿದೆ.</p>.<p>ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಅಮ್ಮತ್ತಿ, ಹೊಸೂರು, ಆತೂರು, ಬಿರ್ನಾಣಿ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಸೇರಿದಂತೆ ವಿವಿಧ ಗ್ರಾಮದ ಸುಮಾರು 300<br />ಕುಟುಂಬದ ಆದಿವಾಸಿಗಳು ಕಳೆದ 114 ದಿನಗಳಿಂದ ಪೊನ್ನಂಪೇಟೆಯಲ್ಲಿರುವ ವಿರಾಜಪೇಟೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯ ಮುಂಭಾಗ ಗುಡಿಸಲು ನಿರ್ಮಿಸಿ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. 100 ದಿನ ಕಳೆದರೂ, ಆಡಳಿತ ವರ್ಗದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.</p>.<p>ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿರುವ ನೂರಾರು ಮಂದಿ ಸ್ಥಳದಲ್ಲೇ ಆಹಾರ ತಯಾರಿಸಿಕೊಂಡು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. ಶಾಶ್ವತ ಸೂರು ಸಿಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.</p>.<p>ಮಾಯಮುಡಿಯಲ್ಲಿ 130 ದಿನ ಪೂರೈಸಿದ ಹೋರಾಟ!</p>.<p>ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಆದಿವಾಸಿಗಳು ಗ್ರಾಮ ಪಂಚಾಯಿತಿ ಮುಂಭಾಗ ನಡೆಸುತ್ತಿರುವ ಹೋರಾಟ 130 ದಿನಗಳನ್ನು ಪೂರೈಸಿದೆ. ರುದ್ರಬೀಡು ಕಂದಾಯ ಗ್ರಾಮದಲ್ಲಿ 4 ಎಕರೆ ಜಾಗವನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಹೆಸರಿನಲ್ಲಿ ಕಾಯ್ದಿರಿಸಿದೆ. 2011-12ರಲ್ಲಿ ಜಿಲ್ಲಾಧಿಕಾರಿ ಅವರ ಆದೇಶದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಉಪಯೋಗಕ್ಕಾಗಿ ಕಾಯ್ದಿರಿಸಿರುವ ಜಾಗದಲ್ಲಿ ನಿವೇಶನಕ್ಕೆ ಜಾಗ ನೀಡಬೇಕೆಂದು ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸಮೀಕ್ಷೆ ನಡೆಸುವುದಾಗಿ ಕಾರ್ಯನಿರ್ವಹಣಾಧಿಕಾರಿ ತಿಳಿಸಿ ತಿಂಗಳು ಕಳೆದರೂ, ಈವರೆಗೂ ಸಮೀಕ್ಷೆಯಾಗಿಲ್ಲ. ನೆಪವನ್ನು ಹೇಳಿಕೊಂಡು ದಿನ ದೂಡುತ್ತಿದ್ದಾರೆ ಎಂದು ಹೋರಾಟ ಸಮಿತಿ ಸಂಚಾಲಕರಾದ ಜ್ಯೋತಿ ದೂರಿದರು. ಅದೇ ವ್ಯಾಪ್ತಿಯಲ್ಲಿ 22 ಎಕರೆ ಸರ್ಕಾರಿ ಜಾಗವಿದ್ದು, ನಿವೇಶನ ರಹಿತರಿಗೆ ಹಂಚಬೇಕೆಂದು ಅವರು ಒತ್ತಾಯಿಸಿದರು.</p>.<p>‘ಸರ್ಕಾರಿ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ’</p>.<p>ಈ ಕುರಿತು ಪ್ರತಿಕ್ರಿಯಿಸಿದ ವಿರಾಜಪೇಟೆ ತಾಲ್ಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಅಪ್ಪಣ್ಣ, ‘ನಿವೇಶನ ರಹಿತರ ಪಟ್ಟಿಯನ್ನು ತಯಾರಿಸಲಾಗಿದ್ದು, ಆದಿವಾಸಿಗಳಿಗೆ ಆಧಾರ್ ಸೇರಿದಂತೆ ಇತರೆ ದಾಖಲೆಗಳಿಗಾಗಿ ಅರ್ಜಿ<br />ಸಲ್ಲಿಸಲಾಗಿದೆ. ಸರ್ಕಾರಿ ಜಾಗವನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿದೆ. ಆ ನಂತರ ಜಾಗವನ್ನು ನಿವೇಶನಕ್ಕಾಗಿ ಕಾಯ್ದಿರಿಸಿದ ಬಳಿಕವಷ್ಟೇ ನಿವೇಶನ ರಹಿತರಿಗೆ ಹಂಚಲು ಸಾಧ್ಯ. ಸರ್ಕಾರಿ ಜಾಗವನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ: </strong>ಲೈನ್ಮನೆಗಳಲ್ಲಿ ವಾಸವಾಗಿರುವ ಆದಿವಾಸಿಗಳು ಶಾಶ್ವತ ನಿವೇಶನ ಒದಗಿಸಲು ಕೈಗೊಂಡಿರುವ ಅಹೋರಾತ್ರಿ ಹೋರಾಟ ನೂರು ದಿನ ಪೂರೈಸಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ಮೌನ ಅವರಲ್ಲಿ ಆಕ್ರೋಶವನ್ನು ಮಡುಗಟ್ಟಿಸಿದೆ.</p>.<p>ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಅಮ್ಮತ್ತಿ, ಹೊಸೂರು, ಆತೂರು, ಬಿರ್ನಾಣಿ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಸೇರಿದಂತೆ ವಿವಿಧ ಗ್ರಾಮದ ಸುಮಾರು 300<br />ಕುಟುಂಬದ ಆದಿವಾಸಿಗಳು ಕಳೆದ 114 ದಿನಗಳಿಂದ ಪೊನ್ನಂಪೇಟೆಯಲ್ಲಿರುವ ವಿರಾಜಪೇಟೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯ ಮುಂಭಾಗ ಗುಡಿಸಲು ನಿರ್ಮಿಸಿ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. 100 ದಿನ ಕಳೆದರೂ, ಆಡಳಿತ ವರ್ಗದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.</p>.<p>ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೇರಿರುವ ನೂರಾರು ಮಂದಿ ಸ್ಥಳದಲ್ಲೇ ಆಹಾರ ತಯಾರಿಸಿಕೊಂಡು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. ಶಾಶ್ವತ ಸೂರು ಸಿಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.</p>.<p>ಮಾಯಮುಡಿಯಲ್ಲಿ 130 ದಿನ ಪೂರೈಸಿದ ಹೋರಾಟ!</p>.<p>ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಆದಿವಾಸಿಗಳು ಗ್ರಾಮ ಪಂಚಾಯಿತಿ ಮುಂಭಾಗ ನಡೆಸುತ್ತಿರುವ ಹೋರಾಟ 130 ದಿನಗಳನ್ನು ಪೂರೈಸಿದೆ. ರುದ್ರಬೀಡು ಕಂದಾಯ ಗ್ರಾಮದಲ್ಲಿ 4 ಎಕರೆ ಜಾಗವನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಹೆಸರಿನಲ್ಲಿ ಕಾಯ್ದಿರಿಸಿದೆ. 2011-12ರಲ್ಲಿ ಜಿಲ್ಲಾಧಿಕಾರಿ ಅವರ ಆದೇಶದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಉಪಯೋಗಕ್ಕಾಗಿ ಕಾಯ್ದಿರಿಸಿರುವ ಜಾಗದಲ್ಲಿ ನಿವೇಶನಕ್ಕೆ ಜಾಗ ನೀಡಬೇಕೆಂದು ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸಮೀಕ್ಷೆ ನಡೆಸುವುದಾಗಿ ಕಾರ್ಯನಿರ್ವಹಣಾಧಿಕಾರಿ ತಿಳಿಸಿ ತಿಂಗಳು ಕಳೆದರೂ, ಈವರೆಗೂ ಸಮೀಕ್ಷೆಯಾಗಿಲ್ಲ. ನೆಪವನ್ನು ಹೇಳಿಕೊಂಡು ದಿನ ದೂಡುತ್ತಿದ್ದಾರೆ ಎಂದು ಹೋರಾಟ ಸಮಿತಿ ಸಂಚಾಲಕರಾದ ಜ್ಯೋತಿ ದೂರಿದರು. ಅದೇ ವ್ಯಾಪ್ತಿಯಲ್ಲಿ 22 ಎಕರೆ ಸರ್ಕಾರಿ ಜಾಗವಿದ್ದು, ನಿವೇಶನ ರಹಿತರಿಗೆ ಹಂಚಬೇಕೆಂದು ಅವರು ಒತ್ತಾಯಿಸಿದರು.</p>.<p>‘ಸರ್ಕಾರಿ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ’</p>.<p>ಈ ಕುರಿತು ಪ್ರತಿಕ್ರಿಯಿಸಿದ ವಿರಾಜಪೇಟೆ ತಾಲ್ಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಅಪ್ಪಣ್ಣ, ‘ನಿವೇಶನ ರಹಿತರ ಪಟ್ಟಿಯನ್ನು ತಯಾರಿಸಲಾಗಿದ್ದು, ಆದಿವಾಸಿಗಳಿಗೆ ಆಧಾರ್ ಸೇರಿದಂತೆ ಇತರೆ ದಾಖಲೆಗಳಿಗಾಗಿ ಅರ್ಜಿ<br />ಸಲ್ಲಿಸಲಾಗಿದೆ. ಸರ್ಕಾರಿ ಜಾಗವನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿದೆ. ಆ ನಂತರ ಜಾಗವನ್ನು ನಿವೇಶನಕ್ಕಾಗಿ ಕಾಯ್ದಿರಿಸಿದ ಬಳಿಕವಷ್ಟೇ ನಿವೇಶನ ರಹಿತರಿಗೆ ಹಂಚಲು ಸಾಧ್ಯ. ಸರ್ಕಾರಿ ಜಾಗವನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>