<p><strong>ಮಡಿಕೇರಿ: </strong>ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈ ತಿದ್ದುಪಡಿ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ’ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ನಡೆಸುತ್ತಿದೆ. ಭಾರತದಂಥ ಜಾತ್ಯತೀತ ರಾಷ್ಟ್ರದಲ್ಲಿ ಪೌರತ್ವವನ್ನು ಧರ್ಮದ ಮೇಲೆ ನಿರ್ಧರಿಸಬಾರದು. ಎಲ್ಲರಿಗೂ ಸಮಾನ ಅವಕಾಶಗಳು ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಕೆಲವೊಂದು ಲೋಪದೋಷಗಳಿದೆ. ಪೌರತ್ವ (ತಿದ್ದುಪಡಿ) ಮಸೂದೆಯು ಕೆಲವೇ ದಿನಗಳಲ್ಲಿ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮರುದಿನವೇ ಅದಕ್ಕೆ ಅಂಗೀಕಾರ ಸಿಗುವ ಸಾಧ್ಯತೆಯಿದ್ದು, ಇದು ಆತಂಕಕಾರಿ ಬೆಳವಣಿಗೆ ಎಂದು ಆಪಾದಿಸಿದರು.</p>.<p>ದೇಶದಲ್ಲಿರುವ ಮುಸ್ಲಿಮರನ್ನೇ ಗುರಿಯಾಗಿಸಿ ಮಸೂದೆ ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ನಡೆಯು ಖಂಡನೀಯ. ಈ ಮಸೂದೆ ಆರ್ಎಸ್ಎಸ್ ಅಜೆಂಡಾ. ಈ ದೇಶವನ್ನು ಹಿಂದೂರಾಷ್ಟ್ರವನ್ನಾಗಿ ಮಾಡಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದರು.</p>.<p>ಮಸೂದೆ ತಿದ್ದುಪಡಿಗೂ ಮೊದಲು ಜನ ಸಾಮಾನ್ಯರ ಅಭಿಪ್ರಾಯ ಸಂಗ್ರಹಿಸಬೇಕು. ನಂತರ, ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.</p>.<p>ಧರ್ಮ, ಸಮುದಾಯವನ್ನು ಗೌರವಿಸಿ ಪೌರತ್ವ ನೀಡಿದರೆ ಮಸೂದೆಯನ್ನು ಬೆಂಬಲಿಸಬಹುದಿತ್ತು. ಆದರೆ, ಕೇಂದ್ರ ಸರ್ಕಾರ ಮುಸ್ಲಿಮೇತರ ವಲಸಿಗರನ್ನು ಹೊರತುಪಡಿಸಿ ನಿರಾಶ್ರಿತರಿಗೆ ಧರ್ಮದ ಆಧಾರದ ಮೇಲೆ ಪೌರತ್ವ ನೀಡಲು ಅವಕಾಶ ಕಲ್ಪಿಸಿಕೊಡಲು ಹೊರಟಿದೆ ಎಂದು ದೂರಿದರು.</p>.<p>ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ಹೀಗಾಗಿ, ಮಸೂದೆಗೆ ಬೆಂಬಲ ಸಿಕ್ಕಿದೆ. ಆದರೆ, ಮಸೂದೆ ದೇಶದಲ್ಲಿಯೇ ಬಹಳ ವಿವಾದಾತ್ಮಕದಿಂದ ಕೂಡಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕ್ಕರ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಡಿ.9ರಂದು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು ಅದನ್ನು ಎಸ್ಡಿಪಿಐ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.</p>.<p>ಮಸೂದೆ ಪ್ರಕಾರ 7 ವರ್ಷಗಳಿಂದ ಭಾರತದಲ್ಲಿ ದೇಶದಲ್ಲಿ ನೆಲೆಸಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದ ಮುಸ್ಲಿಮೇತರ ಜನರಿಗೆ ಪೌರತ್ವ ನೀಡಲು ಮುಂದಾಗಿದೆ. ಧರ್ಮದ ಆಧಾರದ ಈ ಮಸೂದೆ. ಅಕ್ರಮ ವಲಸಿಗರು ಹಾಗೂ ನಿರಾಶ್ರಿತರಿಗೆ ಹೆಚ್ಚು ಲಾಭದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಭಟನೆಯಲ್ಲಿ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್, ನಗರ ಘಟಕದ ಅಧ್ಯಕ್ಷ ಮನ್ಸೂರ್ ಅಲಿ, ಇಬ್ರಾಹಿಂ, ಮುಸ್ಲಿಂ ಒಕ್ಕೂಟದ ಮುಖಂಡ ಹನೀಫ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್ಡಿಪಿಐ) ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಈ ತಿದ್ದುಪಡಿ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ’ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ನಡೆಸುತ್ತಿದೆ. ಭಾರತದಂಥ ಜಾತ್ಯತೀತ ರಾಷ್ಟ್ರದಲ್ಲಿ ಪೌರತ್ವವನ್ನು ಧರ್ಮದ ಮೇಲೆ ನಿರ್ಧರಿಸಬಾರದು. ಎಲ್ಲರಿಗೂ ಸಮಾನ ಅವಕಾಶಗಳು ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಕೆಲವೊಂದು ಲೋಪದೋಷಗಳಿದೆ. ಪೌರತ್ವ (ತಿದ್ದುಪಡಿ) ಮಸೂದೆಯು ಕೆಲವೇ ದಿನಗಳಲ್ಲಿ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮರುದಿನವೇ ಅದಕ್ಕೆ ಅಂಗೀಕಾರ ಸಿಗುವ ಸಾಧ್ಯತೆಯಿದ್ದು, ಇದು ಆತಂಕಕಾರಿ ಬೆಳವಣಿಗೆ ಎಂದು ಆಪಾದಿಸಿದರು.</p>.<p>ದೇಶದಲ್ಲಿರುವ ಮುಸ್ಲಿಮರನ್ನೇ ಗುರಿಯಾಗಿಸಿ ಮಸೂದೆ ಜಾರಿಗೊಳಿಸಲು ಮುಂದಾಗಿರುವ ಸರ್ಕಾರದ ನಡೆಯು ಖಂಡನೀಯ. ಈ ಮಸೂದೆ ಆರ್ಎಸ್ಎಸ್ ಅಜೆಂಡಾ. ಈ ದೇಶವನ್ನು ಹಿಂದೂರಾಷ್ಟ್ರವನ್ನಾಗಿ ಮಾಡಲು ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸಿದೆ ಎಂದು ಆರೋಪಿಸಿದರು.</p>.<p>ಮಸೂದೆ ತಿದ್ದುಪಡಿಗೂ ಮೊದಲು ಜನ ಸಾಮಾನ್ಯರ ಅಭಿಪ್ರಾಯ ಸಂಗ್ರಹಿಸಬೇಕು. ನಂತರ, ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.</p>.<p>ಧರ್ಮ, ಸಮುದಾಯವನ್ನು ಗೌರವಿಸಿ ಪೌರತ್ವ ನೀಡಿದರೆ ಮಸೂದೆಯನ್ನು ಬೆಂಬಲಿಸಬಹುದಿತ್ತು. ಆದರೆ, ಕೇಂದ್ರ ಸರ್ಕಾರ ಮುಸ್ಲಿಮೇತರ ವಲಸಿಗರನ್ನು ಹೊರತುಪಡಿಸಿ ನಿರಾಶ್ರಿತರಿಗೆ ಧರ್ಮದ ಆಧಾರದ ಮೇಲೆ ಪೌರತ್ವ ನೀಡಲು ಅವಕಾಶ ಕಲ್ಪಿಸಿಕೊಡಲು ಹೊರಟಿದೆ ಎಂದು ದೂರಿದರು.</p>.<p>ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ಹೀಗಾಗಿ, ಮಸೂದೆಗೆ ಬೆಂಬಲ ಸಿಕ್ಕಿದೆ. ಆದರೆ, ಮಸೂದೆ ದೇಶದಲ್ಲಿಯೇ ಬಹಳ ವಿವಾದಾತ್ಮಕದಿಂದ ಕೂಡಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕ್ಕರ್ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಡಿ.9ರಂದು ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು ಅದನ್ನು ಎಸ್ಡಿಪಿಐ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.</p>.<p>ಮಸೂದೆ ಪ್ರಕಾರ 7 ವರ್ಷಗಳಿಂದ ಭಾರತದಲ್ಲಿ ದೇಶದಲ್ಲಿ ನೆಲೆಸಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದ ಮುಸ್ಲಿಮೇತರ ಜನರಿಗೆ ಪೌರತ್ವ ನೀಡಲು ಮುಂದಾಗಿದೆ. ಧರ್ಮದ ಆಧಾರದ ಈ ಮಸೂದೆ. ಅಕ್ರಮ ವಲಸಿಗರು ಹಾಗೂ ನಿರಾಶ್ರಿತರಿಗೆ ಹೆಚ್ಚು ಲಾಭದಾಯಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪತ್ರಿಭಟನೆಯಲ್ಲಿ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್, ನಗರ ಘಟಕದ ಅಧ್ಯಕ್ಷ ಮನ್ಸೂರ್ ಅಲಿ, ಇಬ್ರಾಹಿಂ, ಮುಸ್ಲಿಂ ಒಕ್ಕೂಟದ ಮುಖಂಡ ಹನೀಫ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>