<p><strong>ಮಡಿಕೇರಿ</strong>: ಸರ್ಕಾರಿ ಆಸ್ಪತ್ರೆಯನ್ನು ‘ಪಿಪಿಪಿ’ ಮೂಲಕ ಖಾಸಗೀಕರಣ ಮಾಡುವ ಯೋಜನೆ ಕೈ ಬಿಡಬೇಕು ಎಂದು ಒತ್ತಾಯಿಸಿ ಬೇರು ಬೆವರು ಸಾಂಸ್ಕೃತಿಕ ಬಳಗ ಹಾಗೂ ಬುಡಕಟ್ಟು ಕಾರ್ಮಿಕರ ಸಂಘದ ವತಿಯಿಂದ ಕಾರ್ಯಕರ್ತರು ಇಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಗಾಂಧಿ ಮೈದಾನದಿಂದ ಪ್ರತಿಭಟನಾ ಜಾಥಾ ಹೊರಟ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಬೇರು ಬೆವರು ಸಾಂಸ್ಕೃತಿಕ ಬಳಗದ ರಾಜ್ಯ ಘಟಕದ ಸಂಚಾಲಕ ಸೋರಪಲ್ಲಿ ಚಂದ್ರಶೇಖರ್ ಮಾತನಾಡಿ, ‘ತಮಿಳುನಾಡು, ಕೇರಳ ಹಾಗೂ ರಾಜಸ್ಥಾನಗಳಲ್ಲಿ ಇರುವಂತೆಯೇ ಕರ್ನಾಟಕದಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತ ಹಾಗು ಉತ್ತಮ ಗುಣಮಟ್ಟದ ಔಷಧಗಳು ಸಿಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಮೂರೂ ರಾಜ್ಯಗಳಲ್ಲಿಯೂ ಜನರಿಗೆ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಔಷಧವನ್ನು ಹೊರಗಡೆಯಿಂದ ಖರೀದಿಸಿ ತರಲು ಚೀಟಿ ಬರೆದು ಕೊಡುವುದಿಲ್ಲ. ಬದಲು ಅಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಔಷಧಗಳು ಉಚಿತವಾಗಿ ದೊರೆಯುತ್ತವೆ. ಈ ಮೂರೂ ರಾಜ್ಯಗಳ ಸರ್ಕಾರಿ ಆಸ್ಪತ್ರೆಯ ಸುತ್ತಮುತ್ತ ಯಾವುದೇ ಖಾಸಗಿ ಔಷಧ ಅಂಗಡಿಗಳನ್ನು ನಾವು ಕಾಣುವುದಿಲ್ಲ. ಆದರೆ, ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಎದುರು ಖಾಸಗಿ ಔಷಧದ ಅಂಗಡಿಗಳ ಸಾಲುಸಾಲೇ ಇರುತ್ತವೆ. ಔಷಧ ಗುಣಮಟ್ಟವನ್ನು ಕಾಪಾಡುವ ಜವಾಬ್ದಾರಿ ರಾಜ್ಯಸರ್ಕಾರ ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಬಡವರಿಗೆ, ಎಲ್ಲಾ ಕಾರ್ಮಿಕರಿಗೆ, ದಲಿತ ಸಮುದಾಯಗಳಿಗೆ, ಆದಿವಾಸಿ ಸಮುದಾಯಗಳಿಗೆ, ಸ್ಲಂನಿವಾಸಿಗಳಿಗೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಹಾಗೂ ಇತರ ಶೋಷಿತ ಸಮುದಾಯಗಳಿಗೆ ಆರೋಗ್ಯ ಎಲ್ಲಾ ಲಿಂಗ, ವರ್ಗ, ಜಾತಿಯವರ ಹಕ್ಕಾಗಬೇಕು’ ಎಂದು ಆಗ್ರಹಿಸಿದರು.</p>.<p>‘ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆಯನ್ನು ಜಾರಿಗೆ ತರಬೇಕು. ನಮಗೆ ಆರೋಗ್ಯ ರಕ್ಷಣೆಯನ್ನು ಮೂಲಭೂತ ಹಕ್ಕನ್ನಾಗಿ ಮಾಡುವ ಕಾನೂನು ಬೇಕಾಗಿದೆ, ಅದು ಯಾವುದೇ ಸರ್ಕಾರವು ಹಿಂತೆಗೆದುಕೊಳ್ಳಬಹುದಾದ ಯೋಜನೆ ಆಗಬಾರದು. ಈ ಕೂಡಲೇ ಸರ್ಕಾರಿ ಆಸ್ಪತ್ರೆ ಖಾಸಗೀಕರಣ (ಪಿಪಿಪಿ) ಮಾಡುವ ಯೋಜನೆ ಕೈ ಬಿಡಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಆಸ್ಪತ್ರೆ ಖಾಸಗಿಯವರಿಗೆ ಹಸ್ತಾಂತರ ಮಾಡಬಾರದು. ಇದರ ಬದಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಜೊತೆಗೆ, ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಶುಲ್ಕವನ್ನು ನಿಯಂತ್ರಿಸಬೇಕು ಎಂದೂ ಒತ್ತಾಯಿಸಿದರು.</p>.<p>ಬುಡಕಟ್ಟು ಕಾರ್ಮಿಕರ ಸಂಘದ ವೈ.ಬಿ.ಗಪ್ಪು, ಮುಖಂಡರಾದ ಭವ್ಯಾ, ಗೊಟ್ಟ, ಗೀತಾ, ಗಂಗೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಸರ್ಕಾರಿ ಆಸ್ಪತ್ರೆಯನ್ನು ‘ಪಿಪಿಪಿ’ ಮೂಲಕ ಖಾಸಗೀಕರಣ ಮಾಡುವ ಯೋಜನೆ ಕೈ ಬಿಡಬೇಕು ಎಂದು ಒತ್ತಾಯಿಸಿ ಬೇರು ಬೆವರು ಸಾಂಸ್ಕೃತಿಕ ಬಳಗ ಹಾಗೂ ಬುಡಕಟ್ಟು ಕಾರ್ಮಿಕರ ಸಂಘದ ವತಿಯಿಂದ ಕಾರ್ಯಕರ್ತರು ಇಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಗಾಂಧಿ ಮೈದಾನದಿಂದ ಪ್ರತಿಭಟನಾ ಜಾಥಾ ಹೊರಟ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಬೇರು ಬೆವರು ಸಾಂಸ್ಕೃತಿಕ ಬಳಗದ ರಾಜ್ಯ ಘಟಕದ ಸಂಚಾಲಕ ಸೋರಪಲ್ಲಿ ಚಂದ್ರಶೇಖರ್ ಮಾತನಾಡಿ, ‘ತಮಿಳುನಾಡು, ಕೇರಳ ಹಾಗೂ ರಾಜಸ್ಥಾನಗಳಲ್ಲಿ ಇರುವಂತೆಯೇ ಕರ್ನಾಟಕದಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತ ಹಾಗು ಉತ್ತಮ ಗುಣಮಟ್ಟದ ಔಷಧಗಳು ಸಿಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಈ ಮೂರೂ ರಾಜ್ಯಗಳಲ್ಲಿಯೂ ಜನರಿಗೆ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಔಷಧವನ್ನು ಹೊರಗಡೆಯಿಂದ ಖರೀದಿಸಿ ತರಲು ಚೀಟಿ ಬರೆದು ಕೊಡುವುದಿಲ್ಲ. ಬದಲು ಅಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಔಷಧಗಳು ಉಚಿತವಾಗಿ ದೊರೆಯುತ್ತವೆ. ಈ ಮೂರೂ ರಾಜ್ಯಗಳ ಸರ್ಕಾರಿ ಆಸ್ಪತ್ರೆಯ ಸುತ್ತಮುತ್ತ ಯಾವುದೇ ಖಾಸಗಿ ಔಷಧ ಅಂಗಡಿಗಳನ್ನು ನಾವು ಕಾಣುವುದಿಲ್ಲ. ಆದರೆ, ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಎದುರು ಖಾಸಗಿ ಔಷಧದ ಅಂಗಡಿಗಳ ಸಾಲುಸಾಲೇ ಇರುತ್ತವೆ. ಔಷಧ ಗುಣಮಟ್ಟವನ್ನು ಕಾಪಾಡುವ ಜವಾಬ್ದಾರಿ ರಾಜ್ಯಸರ್ಕಾರ ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಬಡವರಿಗೆ, ಎಲ್ಲಾ ಕಾರ್ಮಿಕರಿಗೆ, ದಲಿತ ಸಮುದಾಯಗಳಿಗೆ, ಆದಿವಾಸಿ ಸಮುದಾಯಗಳಿಗೆ, ಸ್ಲಂನಿವಾಸಿಗಳಿಗೆ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಹಾಗೂ ಇತರ ಶೋಷಿತ ಸಮುದಾಯಗಳಿಗೆ ಆರೋಗ್ಯ ಎಲ್ಲಾ ಲಿಂಗ, ವರ್ಗ, ಜಾತಿಯವರ ಹಕ್ಕಾಗಬೇಕು’ ಎಂದು ಆಗ್ರಹಿಸಿದರು.</p>.<p>‘ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆಯನ್ನು ಜಾರಿಗೆ ತರಬೇಕು. ನಮಗೆ ಆರೋಗ್ಯ ರಕ್ಷಣೆಯನ್ನು ಮೂಲಭೂತ ಹಕ್ಕನ್ನಾಗಿ ಮಾಡುವ ಕಾನೂನು ಬೇಕಾಗಿದೆ, ಅದು ಯಾವುದೇ ಸರ್ಕಾರವು ಹಿಂತೆಗೆದುಕೊಳ್ಳಬಹುದಾದ ಯೋಜನೆ ಆಗಬಾರದು. ಈ ಕೂಡಲೇ ಸರ್ಕಾರಿ ಆಸ್ಪತ್ರೆ ಖಾಸಗೀಕರಣ (ಪಿಪಿಪಿ) ಮಾಡುವ ಯೋಜನೆ ಕೈ ಬಿಡಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಆಸ್ಪತ್ರೆ ಖಾಸಗಿಯವರಿಗೆ ಹಸ್ತಾಂತರ ಮಾಡಬಾರದು. ಇದರ ಬದಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>ಜೊತೆಗೆ, ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಶುಲ್ಕವನ್ನು ನಿಯಂತ್ರಿಸಬೇಕು ಎಂದೂ ಒತ್ತಾಯಿಸಿದರು.</p>.<p>ಬುಡಕಟ್ಟು ಕಾರ್ಮಿಕರ ಸಂಘದ ವೈ.ಬಿ.ಗಪ್ಪು, ಮುಖಂಡರಾದ ಭವ್ಯಾ, ಗೊಟ್ಟ, ಗೀತಾ, ಗಂಗೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>