ದೇವಸ್ಥಾನಕ್ಕೆ ಹೋಗುವ ಮಾರ್ಗವಾಗಿಯೇ ನಾಲಡಿ ಮತ್ತು ಅಯ್ಯಂಗೇರಿ ಗ್ರಾಮದ ಜನರು ಹಾಗೂ ಭಕ್ತರು ತೆರಳುತ್ತಿದ್ದು, ಸುಮಾರು 400ರಿಂದ 500 ವಾಹನಗಳು ನಿತ್ಯ ಸಂಚರಿಸುತ್ತವೆ. ಮಳೆಗಾಲದಲ್ಲಿ ಕೆಸರು ಮಯವಾಗುವ ರಸ್ತೆ ಬೇಸಿಗೆಯಲ್ಲಿ ದೂಳಿನಿಂದ ಆವೃತ್ತವಾಗಿ ವಾಹನಗಳು ಮಾತ್ರವಲ್ಲದೆ ಪಾದಾಚಾರಿಗಳಿಗೂ ಹೋಗಿ ಬರಲು ಸಾಧ್ಯವಾಗುತ್ತಿಲ್ಲ. ರಸ್ತೆ ಅವ್ಯವಸ್ಥೆ ಬಗ್ಗೆ ಸಂಬಂಧಿಸಿದ ಇಲಾಖೆಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಸುರನ್ ನಾಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.