<p><strong>ಮಡಿಕೇರಿ</strong>: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದೊಳಗಿನ ಕರಡಿಕಲ್ಲು ಅತ್ತೂರು ಕೊಲ್ಲಿ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟನೆ ನಡೆಸುತ್ತಿರುವ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳ ಪ್ರತಿಭಟನೆ ಶನಿವಾರವೂ ಮುಂದುವರಿಯಿತು.</p>.<p>‘ಬೆಂಗಳೂರು, ಎಚ್.ಡಿ.ಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಂದ ಬಂದಿದ್ದ ಹೋರಾಟಗಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಯಿತು. ಇಬ್ಬರಿಗೆ ಅರಣ್ಯ ಪ್ರವೇಶಕ್ಕೆ ಅನುಮತಿ ನೀಡಿದರು’ ಎಂದು ನಾಗರಹೊಳೆ ಆದಿವಾಸಿ ಜಮ್ಮಾಪಾಳೆ ಹಕ್ಕು ಸ್ಥಾಪನಾ ಸಮಿತಿ ಕಾರ್ಯದರ್ಶಿ ಶಿವು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅರಣ್ಯದೊಳಗೆ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಅರಣ್ಯ ಇಲಾಖೆ ನಮ್ಮನ್ನು ಕಾಡಿನಿಂದ ಹೊರನಡೆಯಿರಿ ಎಂದು ನೋಟಿಸ್ ನೀಡಿದೆ. ಇದೆಲ್ಲವೂ ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸುವ ಪ್ರಯತ್ನ’ ಎಂದು ದೂರಿದರು.</p>.<p>‘ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ, ಕೇಂದ್ರೀಯ ಎಸ್.ಟಿ ಕಮಿಷನ್, ರಾಜ್ಯದ ಎಸ್ಸಿ, ಎಸ್ಟಿ ಕಮಿಷನ್ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು. ಪ್ರತಿಭಟನೆ ಮುಂದುವರಿಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದೊಳಗಿನ ಕರಡಿಕಲ್ಲು ಅತ್ತೂರು ಕೊಲ್ಲಿ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟನೆ ನಡೆಸುತ್ತಿರುವ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳ ಪ್ರತಿಭಟನೆ ಶನಿವಾರವೂ ಮುಂದುವರಿಯಿತು.</p>.<p>‘ಬೆಂಗಳೂರು, ಎಚ್.ಡಿ.ಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಂದ ಬಂದಿದ್ದ ಹೋರಾಟಗಾರರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಯಿತು. ಇಬ್ಬರಿಗೆ ಅರಣ್ಯ ಪ್ರವೇಶಕ್ಕೆ ಅನುಮತಿ ನೀಡಿದರು’ ಎಂದು ನಾಗರಹೊಳೆ ಆದಿವಾಸಿ ಜಮ್ಮಾಪಾಳೆ ಹಕ್ಕು ಸ್ಥಾಪನಾ ಸಮಿತಿ ಕಾರ್ಯದರ್ಶಿ ಶಿವು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅರಣ್ಯದೊಳಗೆ ನಿರ್ಮಾಣ ಕಾಮಗಾರಿ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಅರಣ್ಯ ಇಲಾಖೆ ನಮ್ಮನ್ನು ಕಾಡಿನಿಂದ ಹೊರನಡೆಯಿರಿ ಎಂದು ನೋಟಿಸ್ ನೀಡಿದೆ. ಇದೆಲ್ಲವೂ ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸುವ ಪ್ರಯತ್ನ’ ಎಂದು ದೂರಿದರು.</p>.<p>‘ನಮ್ಮ ಹೋರಾಟವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ, ಕೇಂದ್ರೀಯ ಎಸ್.ಟಿ ಕಮಿಷನ್, ರಾಜ್ಯದ ಎಸ್ಸಿ, ಎಸ್ಟಿ ಕಮಿಷನ್ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು. ಪ್ರತಿಭಟನೆ ಮುಂದುವರಿಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>