<p> <strong>ಕುಶಾಲನಗರ</strong>: ಸಮೀಪದ ಕೊಪ್ಪ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ <br> ಪಡೆದಿದ್ದಾರೆ.</p>.<p>ಇಲ್ಲಿನ ಆದಿಶಂಕರಾಚಾರ್ಯ ಬಡಾವಣೆಯ ನಿವಾಸಿ ಅರಣ್ಯ ಇಲಾಖೆಯ ಅಧಿಕಾರಿ ಎಂ.ಎ. ಆನಂದ ಮತ್ತು ಸುಜಾತಾ ದಂಪತಿಯ ಪುತ್ರಿಯಾಗಿದ್ದು, ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಕುಶಾಲನಗರ ಪಟ್ಟಣಕ್ಕೆ ಹೆಸರು ತಂದಿದ್ದಾಳೆ.</p>.<p><strong>‘ತೇಜಸ್ವಿನಿಗೆ ಸಿಎ ಮಾಡುವಾಸೆ’</strong></p>.<p>‘ನಾನು ರ್ಯಾಂಕ್ ಪಡೆಯಲು ತನ್ನ ಕಲಿಕೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ತನ್ನ ತಂದೆ - ತಾಯಿಯವರ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಕಾರಣವಾಗಿದೆ.<br> ನಾನು ಮೊದಲಿನಿಂದಲೂ ಪ್ರತಿನಿತ್ಯ ಐದಾರು ಗಂಟೆಗಳ ಕಾಲ ಪರಿಶ್ರಮಪಟ್ಟು ಅಭ್ಯಾಸ ಮಾಡುತ್ತಿದ್ದೆ. ಪರೀಕ್ಷಾಪೂರ್ವದಲ್ಲಿ ದಿನಕ್ಕೆ 8-10 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದೆ. ಕಷ್ಟಪಟ್ಟು ಉತ್ತಮ ಅಭ್ಯಾಸ ಮಾಡಿದರೆ ಉತ್ತಮ ಅಂಕಗಳು ದೊರಕಿ ಯಶಸ್ಸು ಲಭಿಸುತ್ತದೆ ಎಂಬ ವಿಶ್ವಾಸವಿತ್ತು’ ಎಂದು ವಿದ್ಯಾರ್ಥಿನಿ ತೇಜಸ್ವಿನಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ನಾನು ಮುಂದೆ ಸಿ.ಎ. ಕೋರ್ಸ್ ಅಭ್ಯಾಸ ಮಾಡುವ ಉದ್ದೇಶ ಹೊಂದಿದ್ದು, ನಮ್ಮ ದೇಶದ ಭವಿಷ್ಯದ ದೃಷ್ಟಿಯಿಂದ ಮತ್ತು ದೇಶದ ಆರ್ಥಿಕಮಟ್ಟ ಸುಧಾರಿಸುವ ದಿಸೆಯಲ್ಲಿ ನಾನು ಪ್ರಯತ್ನಿಸುತ್ತೇನೆ’ ಎಂದು ತೇಜಸ್ವಿನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಕುಶಾಲನಗರ</strong>: ಸಮೀಪದ ಕೊಪ್ಪ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ <br> ಪಡೆದಿದ್ದಾರೆ.</p>.<p>ಇಲ್ಲಿನ ಆದಿಶಂಕರಾಚಾರ್ಯ ಬಡಾವಣೆಯ ನಿವಾಸಿ ಅರಣ್ಯ ಇಲಾಖೆಯ ಅಧಿಕಾರಿ ಎಂ.ಎ. ಆನಂದ ಮತ್ತು ಸುಜಾತಾ ದಂಪತಿಯ ಪುತ್ರಿಯಾಗಿದ್ದು, ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಹಾಗೂ ಕುಶಾಲನಗರ ಪಟ್ಟಣಕ್ಕೆ ಹೆಸರು ತಂದಿದ್ದಾಳೆ.</p>.<p><strong>‘ತೇಜಸ್ವಿನಿಗೆ ಸಿಎ ಮಾಡುವಾಸೆ’</strong></p>.<p>‘ನಾನು ರ್ಯಾಂಕ್ ಪಡೆಯಲು ತನ್ನ ಕಲಿಕೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ತನ್ನ ತಂದೆ - ತಾಯಿಯವರ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಕಾರಣವಾಗಿದೆ.<br> ನಾನು ಮೊದಲಿನಿಂದಲೂ ಪ್ರತಿನಿತ್ಯ ಐದಾರು ಗಂಟೆಗಳ ಕಾಲ ಪರಿಶ್ರಮಪಟ್ಟು ಅಭ್ಯಾಸ ಮಾಡುತ್ತಿದ್ದೆ. ಪರೀಕ್ಷಾಪೂರ್ವದಲ್ಲಿ ದಿನಕ್ಕೆ 8-10 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದೆ. ಕಷ್ಟಪಟ್ಟು ಉತ್ತಮ ಅಭ್ಯಾಸ ಮಾಡಿದರೆ ಉತ್ತಮ ಅಂಕಗಳು ದೊರಕಿ ಯಶಸ್ಸು ಲಭಿಸುತ್ತದೆ ಎಂಬ ವಿಶ್ವಾಸವಿತ್ತು’ ಎಂದು ವಿದ್ಯಾರ್ಥಿನಿ ತೇಜಸ್ವಿನಿ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ನಾನು ಮುಂದೆ ಸಿ.ಎ. ಕೋರ್ಸ್ ಅಭ್ಯಾಸ ಮಾಡುವ ಉದ್ದೇಶ ಹೊಂದಿದ್ದು, ನಮ್ಮ ದೇಶದ ಭವಿಷ್ಯದ ದೃಷ್ಟಿಯಿಂದ ಮತ್ತು ದೇಶದ ಆರ್ಥಿಕಮಟ್ಟ ಸುಧಾರಿಸುವ ದಿಸೆಯಲ್ಲಿ ನಾನು ಪ್ರಯತ್ನಿಸುತ್ತೇನೆ’ ಎಂದು ತೇಜಸ್ವಿನಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>