ಪೊನ್ನಂಪೇಟೆ (ಕೊಡಗು ಜಿಲ್ಲೆ): ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಯಾವುದೇ ವಿಡಿಯೊ ದಾಖಲೆಗಳಿದ್ದರೂ ಕೊಡಲಿ. ಆದರೆ, ಸುಮ್ಮನೆ ಹೇಳಿಕೆ ಕೊಡುವುದು ಸರಿಯಲ್ಲ. ಅವರಿಗೆ ಹೇಳಿಕೆ ನೀಡುವ ಚಟ ಇರಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.