‘ಆನೆಗಳು ತೋಟದಲ್ಲೇ ಬೀಡು ಬಿಟ್ಟು, ಇಲ್ಲೇ ಮರಿ ಹಾಕಿವೆ. ತಜ್ಞರನ್ನು ಕರೆಸಿ ಅವುಗಳನ್ನು ಹೊರಹಾಕುವ ಕ್ರಮಗಳನ್ನು ಕುರಿತು ಪರಿಶೀಲಿಸಲಾಗುವುದು. ಅರಣ್ಯೀಕರಣ ಹೆಚ್ಚು ಮಾಡುವುದು, ಪ್ರಾಣಿಗಳಿಗೆ ಕಾಡಿನಲ್ಲೇ ಆಹಾರ, ನೀರು ಸಿಗುವಂತೆ ಮಾಡುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸುವುದು ಸೇರಿದಂತೆ ಹೊಸ ಹೊಸ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಹೇಳಿದರು.