<p>ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆಗಾಗ ಬಿಡುವು ಕೊಟ್ಟರೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲೂ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ, ಮಂಗಳವಾರ ಮಧ್ಯಾಹ್ನದ ಬಳಿಕ ಬಿರುಸಾಗಿ ಸುರಿಯಿತು.</p>.<p>ಕೆಲವೆಡೆ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಪ್ರವಾಸಿಗರ ಆಕರ್ಷಣೆಯ ತಾಣ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತವು ಮೈದುಂಬಿಕೊಂಡಿದೆ. ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಮಳೆಯಾಗುತ್ತಿದೆ.</p>.<p class="Briefhead">ಸತತ ಮಳೆ</p>.<p>ಸೋಮವಾರಪೇಟೆ: ಕಳೆದ ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ ಗಾಳಿ ಮಳೆ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.</p>.<p>ಮಂಗಳವಾರ ಬೆಳಿಗ್ಗೆಯಿಂದಲೂ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಮೊದಲೇ ಲಾಕ್ಡೌನ್ನಿಂದಾಗಿ ರಸ್ತೆಯಲ್ಲಿ ಜನ ಸಂಚಾರ ಇಲ್ಲದಿರುವು ದರಿಂದ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿದ್ದವು.</p>.<p>ಶಾಂತಳ್ಳಿ ಹೋಬಳಿಯಾದ್ಯಂತ ಬಿರುಸುಗೊಂಡಿರುವ ಮಳೆಯಿಂದಾಗಿ ಹೊಳೆ, ಕೊಳ್ಳಗಳು ತುಂಬಿ ಹರಿಯುತ್ತಿದೆ. ರಾಜ್ಯ ಸೇರಿದಂತೆ<br />ಹೊರ ರಾಜ್ಯದ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತ ಮೈದುಂಬಿ ಹರಿಯುತ್ತಿದೆ.</p>.<p>‘ನಿರಂತರ ಮಳೆಯಿಂದ ಜಲಪಾತಕ್ಕೆ ಸಾಕಷ್ಟು ನೀರು ಹರಿದು ಬರುತ್ತಿರುವುದರಿಂದ ಧುಮ್ಮಿಕ್ಕುತ್ತಿರುವ ಜಲಪಾತದ ದೃಶ್ಯ ಹಾಲ್ನೋರೆಯಂತೆ ಕಾಣುತ್ತಿದೆ. ಆದರೆ, ನಿಷೇಧ ಇರುವುದರಿಂದ<br />ಯಾವುದೇ ಪ್ರವಾಸಿಗರು ಇತ್ತ ಸುಳಿಯುತ್ತಿಲ್ಲ’ ಎಂದು ಸ್ಥಳೀಯರಾದ ಶಿವಣ್ಣ ಹೇಳಿದರು.</p>.<p>ದಿನವೊಂದಕ್ಕೆ 90ರಿಂದ 100 ಮಿ.ಮೀ. ಮಳೆಯಾಗುತ್ತಿದೆ. ಈಗಾಗಲೇ 500 ಮಿ. ಮೀ. ಮಳೆಯಾಗಿರುವುದಾಗಿ ತಿಳಿಸಿದರು.</p>.<p class="Subhead">ಎಲ್ಲೆಲ್ಲಿ ಮಳೆ ಎಷ್ಟು: ಕಳೆದ 24 ಗಂಟೆಗಳಲ್ಲಿ ಶಾಂತಳ್ಳಿ ಹೋಬಳಿಗೆ 94 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ 43, ಕೊಡ್ಲಿಪೇಟೆ 37, ಶನಿವಾರಸಂತೆ 36,<br />ಸುಂಟಿಕೊಪ್ಪ 29.2 ಹಾಗೂ ಕುಶಾಲನಗರದಲ್ಲಿ 15 ಮಿ.ಮೀ. ಮಳೆಯಾದ ವರದಿಯಾಗಿದೆ.</p>.<p class="Briefhead">ಸಾಧಾರಣ ಮಳೆ</p>.<p>ವಿರಾಜಪೇಟೆ: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಮಂಗಳವಾರ ಸಾಧಾರಣ ಮಳೆ ಸುರಿಯಿತು.</p>.<p>ಕಳೆದ 4 ದಿನಗಳಿಂದಲೂ ವಿರಾಜಪೇಟೆ ವಿಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ಹಿನ್ನಲೆಯಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರುವ ನಿರೀಕ್ಷೆಯಿದೆ.</p>.<p>ಕದನೂರು, ಬೇಟೋಳಿ, ಆರ್ಜಿ, ಕಾಕೋಟುಪರಂಬು ಮತ್ತಿತರರ ಗ್ರಾಮಗಳ ವ್ಯಾಪ್ತಿಯಲ್ಲಿನ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಆರಂಭಿಸಲು ರೈತರು ಸಿದ್ಧತೆ ನಡೆಸಿದ್ದಾರೆ. ಕೆಲವೆಡೆ ಮೊದಲ ಸುತ್ತಿನ ಉಳುಮೆ ಕಾರ್ಯ ಪೂರ್ಣಗೊಂಡಿದೆ. ಕದನೂರು ಗ್ರಾಮದ ಉಪನದಿ ಹಾಗೂ ಭೇತ್ರಿಯಲ್ಲಿನ ಕಾವೇರಿ ಹೊಳೆಯ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ.</p>.<p>ವಿರಾಜಪೇಟೆಯ ಪಟ್ಟಣ ವ್ಯಾಪ್ತಿ ಹಾಗೂ ಬೆಟ್ಟ ಪ್ರದೇಶಗಳಲ್ಲಿ ಮಳೆಯಿಂದ ಯಾವುದೇ<br />ಹಾನಿಯಾದ ಕುರಿತು ದೂರುಗಳು ಬಂದಿಲ್ಲ ಎಂದು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 38 ಮಿ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆಗಾಗ ಬಿಡುವು ಕೊಟ್ಟರೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿಯಲ್ಲೂ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ, ಮಂಗಳವಾರ ಮಧ್ಯಾಹ್ನದ ಬಳಿಕ ಬಿರುಸಾಗಿ ಸುರಿಯಿತು.</p>.<p>ಕೆಲವೆಡೆ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಪ್ರವಾಸಿಗರ ಆಕರ್ಷಣೆಯ ತಾಣ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತವು ಮೈದುಂಬಿಕೊಂಡಿದೆ. ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಮಳೆಯಾಗುತ್ತಿದೆ.</p>.<p class="Briefhead">ಸತತ ಮಳೆ</p>.<p>ಸೋಮವಾರಪೇಟೆ: ಕಳೆದ ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ ಗಾಳಿ ಮಳೆ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.</p>.<p>ಮಂಗಳವಾರ ಬೆಳಿಗ್ಗೆಯಿಂದಲೂ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಮೊದಲೇ ಲಾಕ್ಡೌನ್ನಿಂದಾಗಿ ರಸ್ತೆಯಲ್ಲಿ ಜನ ಸಂಚಾರ ಇಲ್ಲದಿರುವು ದರಿಂದ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿದ್ದವು.</p>.<p>ಶಾಂತಳ್ಳಿ ಹೋಬಳಿಯಾದ್ಯಂತ ಬಿರುಸುಗೊಂಡಿರುವ ಮಳೆಯಿಂದಾಗಿ ಹೊಳೆ, ಕೊಳ್ಳಗಳು ತುಂಬಿ ಹರಿಯುತ್ತಿದೆ. ರಾಜ್ಯ ಸೇರಿದಂತೆ<br />ಹೊರ ರಾಜ್ಯದ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಳ್ಳಿ ಜಲಪಾತ ಮೈದುಂಬಿ ಹರಿಯುತ್ತಿದೆ.</p>.<p>‘ನಿರಂತರ ಮಳೆಯಿಂದ ಜಲಪಾತಕ್ಕೆ ಸಾಕಷ್ಟು ನೀರು ಹರಿದು ಬರುತ್ತಿರುವುದರಿಂದ ಧುಮ್ಮಿಕ್ಕುತ್ತಿರುವ ಜಲಪಾತದ ದೃಶ್ಯ ಹಾಲ್ನೋರೆಯಂತೆ ಕಾಣುತ್ತಿದೆ. ಆದರೆ, ನಿಷೇಧ ಇರುವುದರಿಂದ<br />ಯಾವುದೇ ಪ್ರವಾಸಿಗರು ಇತ್ತ ಸುಳಿಯುತ್ತಿಲ್ಲ’ ಎಂದು ಸ್ಥಳೀಯರಾದ ಶಿವಣ್ಣ ಹೇಳಿದರು.</p>.<p>ದಿನವೊಂದಕ್ಕೆ 90ರಿಂದ 100 ಮಿ.ಮೀ. ಮಳೆಯಾಗುತ್ತಿದೆ. ಈಗಾಗಲೇ 500 ಮಿ. ಮೀ. ಮಳೆಯಾಗಿರುವುದಾಗಿ ತಿಳಿಸಿದರು.</p>.<p class="Subhead">ಎಲ್ಲೆಲ್ಲಿ ಮಳೆ ಎಷ್ಟು: ಕಳೆದ 24 ಗಂಟೆಗಳಲ್ಲಿ ಶಾಂತಳ್ಳಿ ಹೋಬಳಿಗೆ 94 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ 43, ಕೊಡ್ಲಿಪೇಟೆ 37, ಶನಿವಾರಸಂತೆ 36,<br />ಸುಂಟಿಕೊಪ್ಪ 29.2 ಹಾಗೂ ಕುಶಾಲನಗರದಲ್ಲಿ 15 ಮಿ.ಮೀ. ಮಳೆಯಾದ ವರದಿಯಾಗಿದೆ.</p>.<p class="Briefhead">ಸಾಧಾರಣ ಮಳೆ</p>.<p>ವಿರಾಜಪೇಟೆ: ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಮಂಗಳವಾರ ಸಾಧಾರಣ ಮಳೆ ಸುರಿಯಿತು.</p>.<p>ಕಳೆದ 4 ದಿನಗಳಿಂದಲೂ ವಿರಾಜಪೇಟೆ ವಿಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ಹಿನ್ನಲೆಯಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರುವ ನಿರೀಕ್ಷೆಯಿದೆ.</p>.<p>ಕದನೂರು, ಬೇಟೋಳಿ, ಆರ್ಜಿ, ಕಾಕೋಟುಪರಂಬು ಮತ್ತಿತರರ ಗ್ರಾಮಗಳ ವ್ಯಾಪ್ತಿಯಲ್ಲಿನ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಆರಂಭಿಸಲು ರೈತರು ಸಿದ್ಧತೆ ನಡೆಸಿದ್ದಾರೆ. ಕೆಲವೆಡೆ ಮೊದಲ ಸುತ್ತಿನ ಉಳುಮೆ ಕಾರ್ಯ ಪೂರ್ಣಗೊಂಡಿದೆ. ಕದನೂರು ಗ್ರಾಮದ ಉಪನದಿ ಹಾಗೂ ಭೇತ್ರಿಯಲ್ಲಿನ ಕಾವೇರಿ ಹೊಳೆಯ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ.</p>.<p>ವಿರಾಜಪೇಟೆಯ ಪಟ್ಟಣ ವ್ಯಾಪ್ತಿ ಹಾಗೂ ಬೆಟ್ಟ ಪ್ರದೇಶಗಳಲ್ಲಿ ಮಳೆಯಿಂದ ಯಾವುದೇ<br />ಹಾನಿಯಾದ ಕುರಿತು ದೂರುಗಳು ಬಂದಿಲ್ಲ ಎಂದು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 38 ಮಿ.ಮೀ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>