<p>ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡದಲ್ಲಿ ಮಳೆಯ ಬಿರುಸು ಮುಂದುವರೆದಿದ್ದು, ಉಳಿದೆಡೆ ಸಾಧಾರಣ ಮಳೆಯಾಗುತ್ತಿದೆ.</p>.<p>ಮಡಿಕೇರಿಯಲ್ಲಿ ದಿನವಿಡೀ ಜಿಟಿಜಿಟಿ ಮಳೆಯಾಯಿತು. ವಿರಾಜಪೇಟೆಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಭಾಗಮಂಡಲದಲ್ಲಿ 3 ಹಾಗೂ ಶಾಂತಳ್ಳಿಯಲ್ಲಿ 2 ಸೆಂ.ಮೀನಷ್ಟು ಮಳೆಯಾಗಿದೆ.</p>.<p>ಮಳೆಯ ಪ್ರಮಾಣ ತಗ್ಗಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 3,290 ಕ್ಯುಸೆಕ್ನಿಂದ 2,121 ಕ್ಯುಸೆಕ್ಗೆ ಇಳಿಕೆಯಾಗಿದೆ. ನದಿಗೆ ಬಿಡುತ್ತಿರುವ ನೀರಿನ ಪ್ರಮಾಣವನ್ನು 1 ಸಾವಿರ ಕ್ಯುಸೆಕ್ನಿಂದ 700 ಕ್ಯುಸೆಕ್ಗೆ ಇಳಿಕೆ ಮಾಡಲಾಗಿದೆ.</p>.<p>ಕಡಿಮೆಯಾದ ಮಳೆಯ ಅಬ್ಬರ<br>(ಉಡುಪಿ ವರದಿ): ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಅಬ್ಬರಿಸಿದ್ದ ಮಳೆ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಡುವು ನೀಡಿತ್ತು. ಮಧ್ಯಾಹ್ನದ ನಂತರ ಸಾಧಾರಣ ಮಳೆ ಸುರಿಯಿತು.</p>.<p>ಉಡುಪಿಯ ಗುಂಡಿಬೈಲು, ಬಡಗುಪೇಟೆ, ಮಠದಬೆಟ್ಟು, ಬನ್ನಂಜೆ, ಪಾಡಿಗಾರು, ಕನ್ನರ್ಪಾಡಿ, ಕರಂಬಳ್ಳಿ ಮೊದಲಾದೆಡೆ ನೆರೆ ನೀರು ಸಂಪೂರ್ಣವಾಗಿ ಇಳಿಕೆಯಾಗಿದೆ. ಪ್ರವಾಹದ ನೀರು ನುಗ್ಗಿದ್ದ ಕಾರಣ ಕೆಲವು ಮನೆಗಳೊಳಗೆ ಕೆಸರು ತುಂಬಿದ್ದು, ಅದನ್ನು ಸ್ವಚ್ಛಗೊಳಿಸಲು ಜನರು ಹರಸಾಹಸಪಟ್ಟರು.</p>.<p>‘ನೆರೆಯಿಂದ ಸಮಸ್ಯೆಯಾದವರಿಗಾಗಿ ಉಡುಪಿಯಲ್ಲಿ ಎರಡು ಕಡೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೆವು. ಮಂಗಳವಾರ ಬೆಳಿಗ್ಗೆಯೇ ಜನ ಮನೆಗಳಿಗೆ ಮರಳಿದ್ದಾರೆ’ ಎಂದು ನಗರ ಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮಂಗಳವಾರ ಕಡಿಮೆಯಾಗಿತ್ತು. ಬಹುತೇಕ ಕಡೆ ಸಂಜೆವರೆಗೂ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಸಂಜೆ ಬಳಿಕ ಸಾಧಾರಣ ಮಳೆಯಾಯಿತು.</p>.<p>ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 10ರಂದು ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. </p>.<p>ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಂಜೆಯ ನಂತರ ಜಡಿ ಮಳೆ ಸುರಿಯಿತು. ಕೊಟ್ಟಿಗೆಹಾರ, ಕೊಪ್ಪ, ಕಳಸ, ಎನ್.ಆರ್.ಪುರ, ಚಿಕ್ಕಮಗಳೂರು ನಗರ ಸೇರಿ ಎಲ್ಲೆಡೆ ಸಾಧಾರಣ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡದಲ್ಲಿ ಮಳೆಯ ಬಿರುಸು ಮುಂದುವರೆದಿದ್ದು, ಉಳಿದೆಡೆ ಸಾಧಾರಣ ಮಳೆಯಾಗುತ್ತಿದೆ.</p>.<p>ಮಡಿಕೇರಿಯಲ್ಲಿ ದಿನವಿಡೀ ಜಿಟಿಜಿಟಿ ಮಳೆಯಾಯಿತು. ವಿರಾಜಪೇಟೆಯಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಭಾಗಮಂಡಲದಲ್ಲಿ 3 ಹಾಗೂ ಶಾಂತಳ್ಳಿಯಲ್ಲಿ 2 ಸೆಂ.ಮೀನಷ್ಟು ಮಳೆಯಾಗಿದೆ.</p>.<p>ಮಳೆಯ ಪ್ರಮಾಣ ತಗ್ಗಿರುವುದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 3,290 ಕ್ಯುಸೆಕ್ನಿಂದ 2,121 ಕ್ಯುಸೆಕ್ಗೆ ಇಳಿಕೆಯಾಗಿದೆ. ನದಿಗೆ ಬಿಡುತ್ತಿರುವ ನೀರಿನ ಪ್ರಮಾಣವನ್ನು 1 ಸಾವಿರ ಕ್ಯುಸೆಕ್ನಿಂದ 700 ಕ್ಯುಸೆಕ್ಗೆ ಇಳಿಕೆ ಮಾಡಲಾಗಿದೆ.</p>.<p>ಕಡಿಮೆಯಾದ ಮಳೆಯ ಅಬ್ಬರ<br>(ಉಡುಪಿ ವರದಿ): ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಅಬ್ಬರಿಸಿದ್ದ ಮಳೆ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಡುವು ನೀಡಿತ್ತು. ಮಧ್ಯಾಹ್ನದ ನಂತರ ಸಾಧಾರಣ ಮಳೆ ಸುರಿಯಿತು.</p>.<p>ಉಡುಪಿಯ ಗುಂಡಿಬೈಲು, ಬಡಗುಪೇಟೆ, ಮಠದಬೆಟ್ಟು, ಬನ್ನಂಜೆ, ಪಾಡಿಗಾರು, ಕನ್ನರ್ಪಾಡಿ, ಕರಂಬಳ್ಳಿ ಮೊದಲಾದೆಡೆ ನೆರೆ ನೀರು ಸಂಪೂರ್ಣವಾಗಿ ಇಳಿಕೆಯಾಗಿದೆ. ಪ್ರವಾಹದ ನೀರು ನುಗ್ಗಿದ್ದ ಕಾರಣ ಕೆಲವು ಮನೆಗಳೊಳಗೆ ಕೆಸರು ತುಂಬಿದ್ದು, ಅದನ್ನು ಸ್ವಚ್ಛಗೊಳಿಸಲು ಜನರು ಹರಸಾಹಸಪಟ್ಟರು.</p>.<p>‘ನೆರೆಯಿಂದ ಸಮಸ್ಯೆಯಾದವರಿಗಾಗಿ ಉಡುಪಿಯಲ್ಲಿ ಎರಡು ಕಡೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದೆವು. ಮಂಗಳವಾರ ಬೆಳಿಗ್ಗೆಯೇ ಜನ ಮನೆಗಳಿಗೆ ಮರಳಿದ್ದಾರೆ’ ಎಂದು ನಗರ ಸಭೆಯ ಪೌರಾಯುಕ್ತ ರಾಯಪ್ಪ ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮಂಗಳವಾರ ಕಡಿಮೆಯಾಗಿತ್ತು. ಬಹುತೇಕ ಕಡೆ ಸಂಜೆವರೆಗೂ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಸಂಜೆ ಬಳಿಕ ಸಾಧಾರಣ ಮಳೆಯಾಯಿತು.</p>.<p>ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 10ರಂದು ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. </p>.<p>ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಂಜೆಯ ನಂತರ ಜಡಿ ಮಳೆ ಸುರಿಯಿತು. ಕೊಟ್ಟಿಗೆಹಾರ, ಕೊಪ್ಪ, ಕಳಸ, ಎನ್.ಆರ್.ಪುರ, ಚಿಕ್ಕಮಗಳೂರು ನಗರ ಸೇರಿ ಎಲ್ಲೆಡೆ ಸಾಧಾರಣ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>