<p><strong>ಸೋಮವಾರಪೇಟೆ</strong>: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸೋಮವಾರ ರಾತ್ರಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಅಲ್ಲಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ.</p>.<p>ದೊಡ್ಡತೋಳೂರು ಗ್ರಾಮದ ದಿನೇಶ್ ಎಂಬುವವರ ಹಸು ಶೀತದಿಂದ ಕೊಟ್ಟಿಗೆಯಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಪಶು ವೈದ್ಯರು ತೆರಳಿ ಪರಿಶೀಲಿಸಿದರು.</p>.<p>ಕುಸೂಬೂರು ದೇವಾಲಯದ ಮುಂಭಾಗ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಮೇಲೆ ಮರಬಿದ್ದು, ಹೆದ್ದಾರಿಗೆ ವಿದ್ಯುತ್ ಕಂಬ ಮತ್ತು ಲೈನ್ ವಾಲಿದೆ. ಖಾಸಗಿ ಬಸ್ ಮೇಲೆ ನಿಂತು ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಕಂಬ ಮತ್ತು ಮಾರ್ಗವನ್ನು ಸರಿಪಡಿಸಿದರು.</p>.<p>ಬಜೆಗುಂಡಿ ಬಳಿ ವಿದ್ಯುತ್ ಮಾರ್ಗದ ಮೇಲೆ ಮರ ಬಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಶುಂಠಿ ಗ್ರಾಮದ ಎಚ್.ಎಂ.ಜಿತೇಂದ್ರ ಎಂಬವರ ಲೈನ್ ಮನೆಯ ಶೀಟ್ ಗಾಳಿಗೆ ಹಾರಿಹೋಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ಶಾಂತಳ್ಳಿ ಹೋಬಳಿಗೆ 14 ಸೆಂ.ಮಿ ಮಳೆಯಾಗಿದೆ. ಸೋಮವಾರಪೇಟೆ ಕಸಬಾ 7.4, ಶನಿವಾರಸಂತೆಗೆ 4.8, ಕೊಡ್ಲಿಪೇಟೆಗೆ 3.54 ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸೋಮವಾರ ರಾತ್ರಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಅಲ್ಲಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ.</p>.<p>ದೊಡ್ಡತೋಳೂರು ಗ್ರಾಮದ ದಿನೇಶ್ ಎಂಬುವವರ ಹಸು ಶೀತದಿಂದ ಕೊಟ್ಟಿಗೆಯಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಪಶು ವೈದ್ಯರು ತೆರಳಿ ಪರಿಶೀಲಿಸಿದರು.</p>.<p>ಕುಸೂಬೂರು ದೇವಾಲಯದ ಮುಂಭಾಗ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಮೇಲೆ ಮರಬಿದ್ದು, ಹೆದ್ದಾರಿಗೆ ವಿದ್ಯುತ್ ಕಂಬ ಮತ್ತು ಲೈನ್ ವಾಲಿದೆ. ಖಾಸಗಿ ಬಸ್ ಮೇಲೆ ನಿಂತು ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಕಂಬ ಮತ್ತು ಮಾರ್ಗವನ್ನು ಸರಿಪಡಿಸಿದರು.</p>.<p>ಬಜೆಗುಂಡಿ ಬಳಿ ವಿದ್ಯುತ್ ಮಾರ್ಗದ ಮೇಲೆ ಮರ ಬಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ಶುಂಠಿ ಗ್ರಾಮದ ಎಚ್.ಎಂ.ಜಿತೇಂದ್ರ ಎಂಬವರ ಲೈನ್ ಮನೆಯ ಶೀಟ್ ಗಾಳಿಗೆ ಹಾರಿಹೋಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ಶಾಂತಳ್ಳಿ ಹೋಬಳಿಗೆ 14 ಸೆಂ.ಮಿ ಮಳೆಯಾಗಿದೆ. ಸೋಮವಾರಪೇಟೆ ಕಸಬಾ 7.4, ಶನಿವಾರಸಂತೆಗೆ 4.8, ಕೊಡ್ಲಿಪೇಟೆಗೆ 3.54 ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>