ಶನಿವಾರ ಸಂತೆ ಹೋಬಳಿಯ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ವೇಳೆಯಲ್ಲಿ ಉತ್ತಮ ಮಳೆ ಸುರಿಯಿತು. ನಂತರ ಬಿಡುವು ಕೊಟ್ಟ ಮಳೆ ಮಧ್ಯಾಹ್ನದ ನಂತರದಲ್ಲಿ ಪ್ರಾರಂಭವಾಯಿತು. ಸಂಜೆಯವರೆಗೆ ಹೋಬಳಿಯ ಗೌಡಳ್ಳಿ, ಆಲೂರು ಸಿದ್ದಾಪುರ, ದುಂಡಳ್ಳಿ, ಬ್ಯಾಡ ಗೊಟ್ಟ, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಕಾಫಿ ಬೆಳೆಗಾರರು ಕಾಫಿ ತೋಟಕ್ಕೆ ರಸಗೊಬ್ಬರ ಸಿಂಪಡಣೆ ಮಾಡಿದರು. ಈ ವೇಳೆಯ ಮಳೆ ಅವಶ್ಯಕತೆ ಇತ್ತು. ಈಗ ಬಂದಿರುವ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಳೆ ಮುಂದಿನ ದಿನಗಳಲ್ಲಿ ಮುಂದುವರೆ ಭತ್ತದ ಪೈರಿಗೆ ಬಂದಿರುವ ಕೀಟಬಾಧೆಯನ್ನು ದೂರವಾಗುತ್ತದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ