<p><strong>ಸುಂಟಿಕೊಪ್ಪ</strong>: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಂಗಳವಾರವೂ ಸಹ ಧಾರಾಕಾರ ಮಳೆ ಸುರಿದು, ಅಲ್ಲಲ್ಲಿ ಮರಗಳು ಧರೆಗೆ ಉರುಳಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ವಾಯುಭಾರ ಕುಸಿತ ಮತ್ತು ಮುಂಗಾರು ಮಳೆಯು ಈ ಬಾರಿ ಮೇ ತಿಂಗಳಲ್ಲಿ ಆರ್ಭಟಿಸುತ್ತಿರುವುದರಿಂದ ಈ ಭಾಗದ ಹಲವೆಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಹಾನಿಯಾಗಿದೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ, ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.</p>.<p>ಸಮೀಪದ ಮಾದಾಪುರ ರಸ್ತೆಯ ಸ್ವಸ್ಥ ವಿಶೇಷ ಶಾಲೆಯ ಬಳಿ ಬೃಹದಾಕಾರದ ಮರ ಬಿದ್ದು ವಾಹನ ಹಾಗೂ ಜನಸಂಚಾರಕ್ಕೆ ಕೆಲಕಾಲ ಅಡ್ಡಿಯಾಗಿತ್ತು. ನಾಕೂರು ಶಿರಂಗಾಲದಲ್ಲೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಸಂಕಷ್ಟ ಎದುರಿಸಬೇಕಾಯಿತು.</p>.<p>ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಡೆಗಳಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಬೆಳಿಗ್ಗೆಯಿಂದಲೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮಾದಾಪುರ- ಕುಂಬೂರು ಮಾರ್ಗ ಮಧ್ಯೆ ಅಲ್ಲಲ್ಲಿ ಮರಗಳು ಬಿದ್ದು, ಬಹಳಷ್ಟು ತೊಂದರೆ ಅನುಭವಿಸುವಂತಾಯಿತು.</p>.<p>ಮಳೆಯಿಂದ ಸುತ್ತಮುತ್ತಲಿನ ಕೆರೆ, ಹೊಳೆಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಂಗಳವಾರವೂ ಸಹ ಧಾರಾಕಾರ ಮಳೆ ಸುರಿದು, ಅಲ್ಲಲ್ಲಿ ಮರಗಳು ಧರೆಗೆ ಉರುಳಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.</p>.<p>ವಾಯುಭಾರ ಕುಸಿತ ಮತ್ತು ಮುಂಗಾರು ಮಳೆಯು ಈ ಬಾರಿ ಮೇ ತಿಂಗಳಲ್ಲಿ ಆರ್ಭಟಿಸುತ್ತಿರುವುದರಿಂದ ಈ ಭಾಗದ ಹಲವೆಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಹಾನಿಯಾಗಿದೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ, ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.</p>.<p>ಸಮೀಪದ ಮಾದಾಪುರ ರಸ್ತೆಯ ಸ್ವಸ್ಥ ವಿಶೇಷ ಶಾಲೆಯ ಬಳಿ ಬೃಹದಾಕಾರದ ಮರ ಬಿದ್ದು ವಾಹನ ಹಾಗೂ ಜನಸಂಚಾರಕ್ಕೆ ಕೆಲಕಾಲ ಅಡ್ಡಿಯಾಗಿತ್ತು. ನಾಕೂರು ಶಿರಂಗಾಲದಲ್ಲೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಸಂಕಷ್ಟ ಎದುರಿಸಬೇಕಾಯಿತು.</p>.<p>ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಡೆಗಳಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಬೆಳಿಗ್ಗೆಯಿಂದಲೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮಾದಾಪುರ- ಕುಂಬೂರು ಮಾರ್ಗ ಮಧ್ಯೆ ಅಲ್ಲಲ್ಲಿ ಮರಗಳು ಬಿದ್ದು, ಬಹಳಷ್ಟು ತೊಂದರೆ ಅನುಭವಿಸುವಂತಾಯಿತು.</p>.<p>ಮಳೆಯಿಂದ ಸುತ್ತಮುತ್ತಲಿನ ಕೆರೆ, ಹೊಳೆಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>