ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ರಾಜಾಸೀಟಿನಲ್ಲಿ ನೂತನ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ಕಾಮಗಾರಿ ಕೈಗೊಳ್ಳಲು ತಡವಾಗಿತ್ತು. ಈಗ ಕಾಮಗಾರಿ ನಡೆಯುತ್ತಿದ್ದು, ರಾಜಾಸೀಟಿನಲ್ಲಿ ಯಾವುದೇ ರೀತಿ ಧಕ್ಕೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕರು ಹೇಳಿದರು.