<p><strong>ಮಡಿಕೇರಿ: </strong>ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಅವರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿ, ಹಿಂದೂ ಜಾಗರಣಾ ವೇದಿಕಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಸುರಿಯುತ್ತಿದ್ದ ಮಳೆಯಲ್ಲೇ ಕೊಡೆಗಳನ್ನು ಹಿಡಿದುಕೊಂಡು ಜನರಲ್ ತಿಮ್ಮಯ್ಯ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯವರೆಗೂ ಮೆರವಣಿಗೆ ನಡೆಸಿದರು.</p>.<p>ದಾರಿಯುದ್ದಕ್ಕೂ ಜಿಹಾದಿಗಳಿಗೆ ದಿಕ್ಕಾರ, ಭಯೋತ್ಪಾದಕರಿಗೆ ದಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜೀವನ ನಿರ್ವಹಣೆಗಾಗಿ ಅಂಗಡಿಯ ಬಾಗಿಲು ತೆರೆದ ಕನ್ಹಯ್ಯಲಾಲ್ ಅವರನ್ನು ಶಿರಚ್ಛೇದ ಮಾಡಿ, ಪ್ರಧಾನಿಯವರಿಗೆ ಬೆದರಿಕೆ ಹಾಕುವ ಇಂತಹವರನ್ನು ಬಿಡಬಾರದು ಎಂದು ಒತ್ತಾಯಿಸಿದರು.</p>.<p>‘ಜಾತ್ಯಾತೀತವಾದಿಗಳು ಈಗ ಎಲ್ಲಿದ್ದಾರೆ’ ಎಂದು ಪ್ರಶ್ನಿಸಿದ ಕಾರ್ಯಕರ್ತರು, ‘ಈ ಪರಿಯಲ್ಲಿ ಬರ್ಬರವಾಗಿ ಹತ್ಯೆಯಾದರೂ ಜಾತ್ಯಾತೀತವಾದಿಗಳು, ಪ್ರಗತಿಪರರು ದನಿ ಎತ್ತುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಅವರ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿ, ಹಿಂದೂ ಜಾಗರಣಾ ವೇದಿಕಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಸುರಿಯುತ್ತಿದ್ದ ಮಳೆಯಲ್ಲೇ ಕೊಡೆಗಳನ್ನು ಹಿಡಿದುಕೊಂಡು ಜನರಲ್ ತಿಮ್ಮಯ್ಯ ವೃತ್ತದ ಬಳಿ ಸೇರಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯವರೆಗೂ ಮೆರವಣಿಗೆ ನಡೆಸಿದರು.</p>.<p>ದಾರಿಯುದ್ದಕ್ಕೂ ಜಿಹಾದಿಗಳಿಗೆ ದಿಕ್ಕಾರ, ಭಯೋತ್ಪಾದಕರಿಗೆ ದಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜೀವನ ನಿರ್ವಹಣೆಗಾಗಿ ಅಂಗಡಿಯ ಬಾಗಿಲು ತೆರೆದ ಕನ್ಹಯ್ಯಲಾಲ್ ಅವರನ್ನು ಶಿರಚ್ಛೇದ ಮಾಡಿ, ಪ್ರಧಾನಿಯವರಿಗೆ ಬೆದರಿಕೆ ಹಾಕುವ ಇಂತಹವರನ್ನು ಬಿಡಬಾರದು ಎಂದು ಒತ್ತಾಯಿಸಿದರು.</p>.<p>‘ಜಾತ್ಯಾತೀತವಾದಿಗಳು ಈಗ ಎಲ್ಲಿದ್ದಾರೆ’ ಎಂದು ಪ್ರಶ್ನಿಸಿದ ಕಾರ್ಯಕರ್ತರು, ‘ಈ ಪರಿಯಲ್ಲಿ ಬರ್ಬರವಾಗಿ ಹತ್ಯೆಯಾದರೂ ಜಾತ್ಯಾತೀತವಾದಿಗಳು, ಪ್ರಗತಿಪರರು ದನಿ ಎತ್ತುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>