<p><strong>ಮಡಿಕೇರಿ:</strong> ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆ.ಎಸ್. ರಮೇಶ್ ಹೊಳ್ಳ ಅವರು ಬುಧವಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ರಮೇಶ್ ಹೊಳ್ಳ ಅವರು ಮಾತನಾಡಿ, ‘ಏಜೆಂಟರ ಹಸ್ತಕ್ಷೇಪ ಇಲ್ಲದೆ ನೇರವಾಗಿ ಕಚೇರಿ ಸಂಪರ್ಕಿಸಿ ಕೆಲಸ ಕಾರ್ಯ ಮಾಡಿಕೊಳ್ಳಿ. ಮಧ್ಯವರ್ತಿಗಳ ಅಗತ್ಯ ಇನ್ನು ಮುಂದೆ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇರುವುದಿಲ್ಲ’ ಎಂದು ಹೇಳಿದರು.</p>.<p>‘ಮೂಡಾಕ್ಕೆ ಸ್ವಂತ ಕಚೇರಿಯನ್ನೂ ನನ್ನ ಅಧಿಕಾರವಧಿಯಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಗುತ್ತದೆ. ಕಡತಗಳನ್ನು ವಿಳಂಬ ರಹಿತವಾಗಿ ವಿಲೇವಾರಿ ಮಾಡಲೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.</p>.<p>ಹಿರಿಯ ವೈದ್ಯರಾದ ಡಾ.ಎಂ.ಜಿ.ಪಾಟ್ಕರ್, ಪ್ರಮುಖರಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ಬೆಪ್ಪೂರನ ಮೇದಪ್ಪ, ರವೀಂದ್ರ ರೈ, ಕೆ.ಎಸ್. ದೇವಯ್ಯ, ಮಡಿಕೇರಿ ನಗರಾಭಿವೃದ್ಧಿ ಆಯುಕ್ತ ಶೇಷು ಅವರು ಶುಭ ಹಾರೈಸಿದರು.</p>.<p>3 ವರ್ಷ ಕಾಲ ರಮೇಶ್ ಹೊಳ್ಳ ಅವರು ಮೂಡಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೊದಲು ಮಡಿಕೇರಿಯ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿಯೂ ಹೊಳ್ಳ ಅವರು ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆ.ಎಸ್. ರಮೇಶ್ ಹೊಳ್ಳ ಅವರು ಬುಧವಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ರಮೇಶ್ ಹೊಳ್ಳ ಅವರು ಮಾತನಾಡಿ, ‘ಏಜೆಂಟರ ಹಸ್ತಕ್ಷೇಪ ಇಲ್ಲದೆ ನೇರವಾಗಿ ಕಚೇರಿ ಸಂಪರ್ಕಿಸಿ ಕೆಲಸ ಕಾರ್ಯ ಮಾಡಿಕೊಳ್ಳಿ. ಮಧ್ಯವರ್ತಿಗಳ ಅಗತ್ಯ ಇನ್ನು ಮುಂದೆ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇರುವುದಿಲ್ಲ’ ಎಂದು ಹೇಳಿದರು.</p>.<p>‘ಮೂಡಾಕ್ಕೆ ಸ್ವಂತ ಕಚೇರಿಯನ್ನೂ ನನ್ನ ಅಧಿಕಾರವಧಿಯಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಗುತ್ತದೆ. ಕಡತಗಳನ್ನು ವಿಳಂಬ ರಹಿತವಾಗಿ ವಿಲೇವಾರಿ ಮಾಡಲೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.</p>.<p>ಹಿರಿಯ ವೈದ್ಯರಾದ ಡಾ.ಎಂ.ಜಿ.ಪಾಟ್ಕರ್, ಪ್ರಮುಖರಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ಬೆಪ್ಪೂರನ ಮೇದಪ್ಪ, ರವೀಂದ್ರ ರೈ, ಕೆ.ಎಸ್. ದೇವಯ್ಯ, ಮಡಿಕೇರಿ ನಗರಾಭಿವೃದ್ಧಿ ಆಯುಕ್ತ ಶೇಷು ಅವರು ಶುಭ ಹಾರೈಸಿದರು.</p>.<p>3 ವರ್ಷ ಕಾಲ ರಮೇಶ್ ಹೊಳ್ಳ ಅವರು ಮೂಡಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಮೊದಲು ಮಡಿಕೇರಿಯ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿಯೂ ಹೊಳ್ಳ ಅವರು ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>