‘ಪಶ್ಚಿಮ ಬಂಗಾಲ ಮತ್ತು ಮಹಾರಾಷ್ಟ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ದೇಶದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ ಎಂಬುದಕ್ಕೆ ದ್ಯೋತಕ. ಜತೆಗೆ, ಮಧ್ಯ ಹಾಗೂ ಉತ್ತರ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಕಡೆ ನಡೆದಿರುವ ಉಪಚುನಾವಣೆಗಳಲ್ಲಿ ಅದು ಸೋತಿರುವುದು ಆ ಪಕ್ಷದ ಜನಪ್ರಿಯತೆ ಕುಗ್ಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆ ‘ಮೋದಿ ರಾಜ್ಯ’ವನ್ನು ಕೊನೆಗೊಳಿಸುವ ಮೆಟ್ಟಿಲಾಗಲಿದೆ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ಹೇಳಿದರು.