<p><strong>ಮಡಿಕೇರಿ</strong>: ಕೇರಳ ಗಡಿಭಾಗ ಕುಟ್ಟ ಗ್ರಾಮದ ನಾಥಂಗಾಲದ ಸಮೀಪ ಇಬ್ಬರು ಬಾಲಕಿಯರನ್ನು ಬಲವಂತವಾಗಿ ಕಾರಿನಲ್ಲಿ ಹತ್ತಿಸಿಕೊಂಡ ಐವರು ಯುವಕರು ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮತ್ತೊಬ್ಬ ಬಾಲಕಿ ತಪ್ಪಿಸಿಕೊಂಡು, ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಬಾಲಕಿಯರಿಗೆ ಪರಿಚಿತರಾಗಿದ್ದ ಮೂವರು ಯುವಕರು ಅವರನ್ನು ಕಾರಿನಲ್ಲಿ ನಾಥಂಗಾಲದ ಕಾಫಿತೋಟವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಮತ್ತಿಬ್ಬರು ಯುವಕರು ಜೊತೆಯಾಗಿದ್ದರು. ಒಬ್ಬ ಬಾಲಕಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದು, ಮತ್ತೊಬ್ಬ ಬಾಲಕಿಯ ಮೇಲೆ ಇನ್ನುಳಿದ ಮೂವರು ಅತ್ಯಾಚಾರಕ್ಕೆ ಯತ್ನಿಸಿದ್ದರು. ಆ ವೇಳೆ ತಪ್ಪಿಸಿಕೊಂಡ ಆಕೆ ಪಕ್ಕದಲ್ಲೇ ಇದ್ದ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಳು. ಗ್ರಾಮಸ್ಥರು ಕಾರನ್ನು ತಡೆಯುತ್ತಿದ್ದಂತೆ, ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯನ್ನು ಕಾರಿನಿಂದ ಕೆಳಗಿಳಿಸಿ ಆರೋಪಿಗಳು ಪರಾರಿಯಾಗಿದ್ದರು. ನಂತರ, ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಟ್ಟ ಸಮೀಪದ ನಾಥಂಗಾಲದ ನವೀಂದ್ರ (24), ಅಕ್ಷಯ್ (27), ಕೇರಳದ ತೋಳ್ಪಟ್ಟಿಯ ನಡುಂದನ ಕಾಲೊನಿಯ ರಾಹುಲ್ (21), ಮನು (25) ಹಾಗೂ ಸಂದೀಪ್ (27) ಬಂಧಿತರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೇರಳ ಗಡಿಭಾಗ ಕುಟ್ಟ ಗ್ರಾಮದ ನಾಥಂಗಾಲದ ಸಮೀಪ ಇಬ್ಬರು ಬಾಲಕಿಯರನ್ನು ಬಲವಂತವಾಗಿ ಕಾರಿನಲ್ಲಿ ಹತ್ತಿಸಿಕೊಂಡ ಐವರು ಯುವಕರು ಒಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮತ್ತೊಬ್ಬ ಬಾಲಕಿ ತಪ್ಪಿಸಿಕೊಂಡು, ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಬಾಲಕಿಯರಿಗೆ ಪರಿಚಿತರಾಗಿದ್ದ ಮೂವರು ಯುವಕರು ಅವರನ್ನು ಕಾರಿನಲ್ಲಿ ನಾಥಂಗಾಲದ ಕಾಫಿತೋಟವೊಂದಕ್ಕೆ ಕರೆದೊಯ್ದಿದ್ದರು. ಅಲ್ಲಿ ಮತ್ತಿಬ್ಬರು ಯುವಕರು ಜೊತೆಯಾಗಿದ್ದರು. ಒಬ್ಬ ಬಾಲಕಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿದ್ದು, ಮತ್ತೊಬ್ಬ ಬಾಲಕಿಯ ಮೇಲೆ ಇನ್ನುಳಿದ ಮೂವರು ಅತ್ಯಾಚಾರಕ್ಕೆ ಯತ್ನಿಸಿದ್ದರು. ಆ ವೇಳೆ ತಪ್ಪಿಸಿಕೊಂಡ ಆಕೆ ಪಕ್ಕದಲ್ಲೇ ಇದ್ದ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಳು. ಗ್ರಾಮಸ್ಥರು ಕಾರನ್ನು ತಡೆಯುತ್ತಿದ್ದಂತೆ, ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯನ್ನು ಕಾರಿನಿಂದ ಕೆಳಗಿಳಿಸಿ ಆರೋಪಿಗಳು ಪರಾರಿಯಾಗಿದ್ದರು. ನಂತರ, ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕುಟ್ಟ ಸಮೀಪದ ನಾಥಂಗಾಲದ ನವೀಂದ್ರ (24), ಅಕ್ಷಯ್ (27), ಕೇರಳದ ತೋಳ್ಪಟ್ಟಿಯ ನಡುಂದನ ಕಾಲೊನಿಯ ರಾಹುಲ್ (21), ಮನು (25) ಹಾಗೂ ಸಂದೀಪ್ (27) ಬಂಧಿತರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>