<p><strong>ಮಡಿಕೇರಿ</strong>: ನಗರದ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.</p>.<p>ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆದ ರಥೋತ್ಸವದಲ್ಲಿ ಹಲವಾರು ಮಂದಿ ಭಾಗಿಯಾದರು. ವ್ರತ ಪಾಲಿಸಿದ್ದ ಭಕ್ತರು ರಥವನ್ನು ಎಳೆದರು.</p>.<p>ಬೆಳಿಗ್ಗೆಯೇ ಇಲ್ಲಿ ವಿವಿಧ ಬಗೆಯ ಪೂಜಾ ಕೈಂಕರ್ಯಗಳು ಆರಂಭವಾಗುತ್ತಿದ್ದಂತೆ ಭಕ್ತರೂ ಸೇರತೊಡಗಿದರು. ಧ್ವಜಾರೋಹಣದ ನಂತರ ಗಣಪತಿ ಹೋಮ ಆರಂಭವಾಗುತ್ತಿದ್ದಂತೆ ಭಕ್ತರ ಸಂದಣಿ ಹೆಚ್ಚಾಯಿತು. ನಂತರ ದೇವರ ಮೂರ್ತಿಗೆ ಅಭಿಷೇಕ, ಹೂವಿನ ಅಲಂಕಾರ, ತೀರ್ಥಸ್ನಾನಗಳು ನಡೆದವು.</p>.<p>ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ಬಳಿಕ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವ ಆರಂಭವಾದಾಗ ದೇಗುಲದ ಆವರಣ ಭಕ್ತರಿಂದ ತುಂಬಿ ಹೋಗಿತ್ತು. ನೂರಾರು ಭಕ್ತರು ಕೈಮುಗಿಯುತ್ತ ರಥದ ಹಿಂದೆ ಹಾಗೂ ಇಕ್ಕೆಲಗಳಲ್ಲಿ ಹೆಜ್ಜೆ ಹಾಕಿದರು.</p>.<p>ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ, ಅನ್ನದಾನ ಮೊದಲಾದ ಧಾರ್ಮಿಕ ಕೈಂಕರ್ಯಗಳಲ್ಲೂ ನೂರಾರು ಭಕ್ತರು ಸೇರಿದ್ದರು.</p>.<p>ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ, ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯಕ್ಕೆ ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಮಡಿಕೇರಿ ಮಾತ್ರವಲ್ಲ, ಕೊಡಗು, ಮೈಸೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಹೆಚ್ಚಿನ ಭಕ್ತರು ರಥೋತ್ಸವಕ್ಕೆ ಆಗಮಿಸಿದ್ದರು.</p>.<p>Highlights - ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ವಿವಿಧ ಪೂಜಾ ಕೈಂಕರ್ಯಗಳು ರಥ ಎಳೆದ ವ್ರತ ಪಾಲಿಸಿದ್ದ ಭಕ್ತರು ಅಕ್ಕಪಕ್ಕದ ಜಿಲ್ಲೆಗಳಿಂದಲೂ ಭಕ್ತರ ಆಗಮನ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಗರದ ಕರ್ಣಂಗೇರಿ ಕ್ಷೇತ್ರದ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.</p>.<p>ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆದ ರಥೋತ್ಸವದಲ್ಲಿ ಹಲವಾರು ಮಂದಿ ಭಾಗಿಯಾದರು. ವ್ರತ ಪಾಲಿಸಿದ್ದ ಭಕ್ತರು ರಥವನ್ನು ಎಳೆದರು.</p>.<p>ಬೆಳಿಗ್ಗೆಯೇ ಇಲ್ಲಿ ವಿವಿಧ ಬಗೆಯ ಪೂಜಾ ಕೈಂಕರ್ಯಗಳು ಆರಂಭವಾಗುತ್ತಿದ್ದಂತೆ ಭಕ್ತರೂ ಸೇರತೊಡಗಿದರು. ಧ್ವಜಾರೋಹಣದ ನಂತರ ಗಣಪತಿ ಹೋಮ ಆರಂಭವಾಗುತ್ತಿದ್ದಂತೆ ಭಕ್ತರ ಸಂದಣಿ ಹೆಚ್ಚಾಯಿತು. ನಂತರ ದೇವರ ಮೂರ್ತಿಗೆ ಅಭಿಷೇಕ, ಹೂವಿನ ಅಲಂಕಾರ, ತೀರ್ಥಸ್ನಾನಗಳು ನಡೆದವು.</p>.<p>ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ಬಳಿಕ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವ ಆರಂಭವಾದಾಗ ದೇಗುಲದ ಆವರಣ ಭಕ್ತರಿಂದ ತುಂಬಿ ಹೋಗಿತ್ತು. ನೂರಾರು ಭಕ್ತರು ಕೈಮುಗಿಯುತ್ತ ರಥದ ಹಿಂದೆ ಹಾಗೂ ಇಕ್ಕೆಲಗಳಲ್ಲಿ ಹೆಜ್ಜೆ ಹಾಕಿದರು.</p>.<p>ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ, ಅನ್ನದಾನ ಮೊದಲಾದ ಧಾರ್ಮಿಕ ಕೈಂಕರ್ಯಗಳಲ್ಲೂ ನೂರಾರು ಭಕ್ತರು ಸೇರಿದ್ದರು.</p>.<p>ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ, ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯಕ್ಕೆ ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಮಡಿಕೇರಿ ಮಾತ್ರವಲ್ಲ, ಕೊಡಗು, ಮೈಸೂರು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಹೆಚ್ಚಿನ ಭಕ್ತರು ರಥೋತ್ಸವಕ್ಕೆ ಆಗಮಿಸಿದ್ದರು.</p>.<p>Highlights - ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ವಿವಿಧ ಪೂಜಾ ಕೈಂಕರ್ಯಗಳು ರಥ ಎಳೆದ ವ್ರತ ಪಾಲಿಸಿದ್ದ ಭಕ್ತರು ಅಕ್ಕಪಕ್ಕದ ಜಿಲ್ಲೆಗಳಿಂದಲೂ ಭಕ್ತರ ಆಗಮನ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>