ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದೆ. ಬೆಳಿಗ್ಗೆ 9.20ಕ್ಕೆ ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿಗಳಾದ ಗೋವಿಂದಸ್ವಾಮಿ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.