<p><strong>ಸೋಮವಾರಪೇಟೆ:</strong> ವೈದ್ಯಕೀಯ ತುರ್ತು ಚಿಕಿತ್ಸೆಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿಗಾಗಿ 2027ರ ಮಾರ್ಚ್ 31ರವರೆಗೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ತಿಳಿಸಿದರು.</p>.<p>ತಾಲೂಕು ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಆಹಾರ ಇಲಾಖೆಗೆ ಸಂಬಂಧಿಸಿ ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಎಪಿಎಲ್ ಆಗಿ ಪರಿವರ್ತನೆಗೊಂಡಿದ್ದವರ ಪೈಕಿ 261 ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಅರ್ಜಿ ಸ್ವೀಕೃತಗೊಂಡಿದೆ. ಇದರ ಪೈಕಿ 102 ಪ್ರಕರಣಗಳನ್ನು ಮರುಸ್ಥಾಪಿಸಲಾಗಿದ್ದು, ಉಳಿದ 78 ಪ್ರಕರಣಗಳಿಗೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿದೆ ಎಂದುಸಭೆಗೆ ತಿಳಿಸಿದರು.</p>.<p>ಯುವನಿಧಿ ಯೋಜನೆಯಡಿ 2024ರ ಜನವರಿಯಿಂದ 2026ರ ಫೆಬ್ರುವರಿಯವರೆಗೆ ₹1.64 ಕೋಟಿ ಯುವ ನಿಧಿ ಹಣ ನೀಡಲಾಗಿರುತ್ತದೆ ಎಂದು ಉದ್ಯೋಗಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.</p>.<p>ಗೃಹಲಕ್ಷ್ಮೀ ಯೋಜನೆಯಡಿ 2026ರ ಮಾರ್ಚ್ನಿಂದ ಪಾವತಿಗೆ ಬಾಕಿ ಇದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ತಿಳಿಸಿದರು.ಸಭೆಯಲ್ಲಿ ತಾ.ಪಂ. ಶ್ರೀನಿವಾಸ್ , ಸಮಿತಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-51-822159410</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ವೈದ್ಯಕೀಯ ತುರ್ತು ಚಿಕಿತ್ಸೆಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿ ತಿದ್ದುಪಡಿಗಾಗಿ 2027ರ ಮಾರ್ಚ್ 31ರವರೆಗೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ತಿಳಿಸಿದರು.</p>.<p>ತಾಲೂಕು ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಆಹಾರ ಇಲಾಖೆಗೆ ಸಂಬಂಧಿಸಿ ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಎಪಿಎಲ್ ಆಗಿ ಪರಿವರ್ತನೆಗೊಂಡಿದ್ದವರ ಪೈಕಿ 261 ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರೆಂದು ಅರ್ಜಿ ಸ್ವೀಕೃತಗೊಂಡಿದೆ. ಇದರ ಪೈಕಿ 102 ಪ್ರಕರಣಗಳನ್ನು ಮರುಸ್ಥಾಪಿಸಲಾಗಿದ್ದು, ಉಳಿದ 78 ಪ್ರಕರಣಗಳಿಗೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸುವಂತೆ ನೋಟಿಸ್ ನೀಡಲಾಗಿದೆ ಎಂದುಸಭೆಗೆ ತಿಳಿಸಿದರು.</p>.<p>ಯುವನಿಧಿ ಯೋಜನೆಯಡಿ 2024ರ ಜನವರಿಯಿಂದ 2026ರ ಫೆಬ್ರುವರಿಯವರೆಗೆ ₹1.64 ಕೋಟಿ ಯುವ ನಿಧಿ ಹಣ ನೀಡಲಾಗಿರುತ್ತದೆ ಎಂದು ಉದ್ಯೋಗಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದರು.</p>.<p>ಗೃಹಲಕ್ಷ್ಮೀ ಯೋಜನೆಯಡಿ 2026ರ ಮಾರ್ಚ್ನಿಂದ ಪಾವತಿಗೆ ಬಾಕಿ ಇದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ತಿಳಿಸಿದರು.ಸಭೆಯಲ್ಲಿ ತಾ.ಪಂ. ಶ್ರೀನಿವಾಸ್ , ಸಮಿತಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-51-822159410</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>